<p>ನವದೆಹಲಿ: ವೈವಾಹಿಕ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ ಮಧ್ಯದಲ್ಲಿ ಅರಂಭಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.</p>.<p>ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠವು, ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಆರಂಭಿಸಬೇಕು ಎಂಬ ವಕೀಲೆ ಕರುಣಾ ನಂದಿ ಅವರ ಮನವಿಯನ್ನು ಪರಿಗಣಿಸಿ, ಈ ನಿರ್ಧಾರ ಪ್ರಕಟಿಸಿತು.</p>.<p>‘ಸಂವಿಧಾನ ಪೀಠದ ಮುಂದೆ ಹಲವು ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಈ ಅರ್ಜಿಗಳ ವಿಚಾರಣೆ ಪೂರ್ಣಗೊಂಡ ನಂತರ ವೈವಾಹಿಕ ಅತ್ಯಾಚಾರ ಕುರಿತ ಅರ್ಜಿಗಳನ್ನು ವಿಚಾರಣಾ ಪಟ್ಟಿಗೆ ಸೇರಿಸಲಾಗುವುದು‘ ಎಂದು ನ್ಯಾಯಪೀಠ ಹೇಳಿತು.</p>.<p>‘ಈ ವಿಚಾರವಾಗಿ ವಾದ ಮಂಡನೆಗೆ ಎಷ್ಟು ದಿನಗಳು ಅಗತ್ಯ’ ಎಂದು ಮೆಹ್ತಾ ಹಾಗೂ ಅರ್ಜಿದಾರರನ್ನು ನ್ಯಾಯಪೀಠ ಪ್ರಶ್ನಿಸಿತು.</p>.<p>‘ಈ ವಿಷಯವು ಸಾಮಾಜಿಕವಾಗಿ ಪರಿಣಾಮ ಬೀರುವ ಕಾರಣ, ವಾದ ಮಂಡನೆಗೆ ನನಗೆ ಎರಡು ದಿನಗಳು ಬೇಕು’ ಎಂದು ಮೆಹ್ತಾ ತಿಳಿಸಿದರೆ, ತಮಗೆ ಮೂರು ದಿನಗಳಷ್ಟು ಕಾಲಾವಕಾಶದ ಅಗತ್ಯ ಇದೆ ಎಂದು ಅರ್ಜಿದಾರರ ಪರ ವಕೀಲ ಹೇಳಿದರು.</p>.<p>‘ಹಾಗಾದರೆ, ಅರ್ಜಿಗಳನ್ನು ಮುಂದಿನ ವರ್ಷ ಏಪ್ರಿಲ್ನ ವಿಚಾರಣಾ ಪಟ್ಟಿಗೆ ಸೇರಿಸಬೇಕಾಗುತ್ತದೆ’ ಎಂದು ವ್ಯಂಗ್ಯಭರಿತ ಧಾಟಿಯಲ್ಲಿ ಹೇಳಿದ ಸಿಜೆಐ, ಅಕ್ಟೋಬರ್ ಮಧ್ಯದಲ್ಲಿ ವಿಚಾರಣೆಯ ಪಟ್ಟಿಗೆ ಸೇರಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ವೈವಾಹಿಕ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ ಮಧ್ಯದಲ್ಲಿ ಅರಂಭಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.</p>.<p>ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠವು, ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಆರಂಭಿಸಬೇಕು ಎಂಬ ವಕೀಲೆ ಕರುಣಾ ನಂದಿ ಅವರ ಮನವಿಯನ್ನು ಪರಿಗಣಿಸಿ, ಈ ನಿರ್ಧಾರ ಪ್ರಕಟಿಸಿತು.</p>.<p>‘ಸಂವಿಧಾನ ಪೀಠದ ಮುಂದೆ ಹಲವು ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಈ ಅರ್ಜಿಗಳ ವಿಚಾರಣೆ ಪೂರ್ಣಗೊಂಡ ನಂತರ ವೈವಾಹಿಕ ಅತ್ಯಾಚಾರ ಕುರಿತ ಅರ್ಜಿಗಳನ್ನು ವಿಚಾರಣಾ ಪಟ್ಟಿಗೆ ಸೇರಿಸಲಾಗುವುದು‘ ಎಂದು ನ್ಯಾಯಪೀಠ ಹೇಳಿತು.</p>.<p>‘ಈ ವಿಚಾರವಾಗಿ ವಾದ ಮಂಡನೆಗೆ ಎಷ್ಟು ದಿನಗಳು ಅಗತ್ಯ’ ಎಂದು ಮೆಹ್ತಾ ಹಾಗೂ ಅರ್ಜಿದಾರರನ್ನು ನ್ಯಾಯಪೀಠ ಪ್ರಶ್ನಿಸಿತು.</p>.<p>‘ಈ ವಿಷಯವು ಸಾಮಾಜಿಕವಾಗಿ ಪರಿಣಾಮ ಬೀರುವ ಕಾರಣ, ವಾದ ಮಂಡನೆಗೆ ನನಗೆ ಎರಡು ದಿನಗಳು ಬೇಕು’ ಎಂದು ಮೆಹ್ತಾ ತಿಳಿಸಿದರೆ, ತಮಗೆ ಮೂರು ದಿನಗಳಷ್ಟು ಕಾಲಾವಕಾಶದ ಅಗತ್ಯ ಇದೆ ಎಂದು ಅರ್ಜಿದಾರರ ಪರ ವಕೀಲ ಹೇಳಿದರು.</p>.<p>‘ಹಾಗಾದರೆ, ಅರ್ಜಿಗಳನ್ನು ಮುಂದಿನ ವರ್ಷ ಏಪ್ರಿಲ್ನ ವಿಚಾರಣಾ ಪಟ್ಟಿಗೆ ಸೇರಿಸಬೇಕಾಗುತ್ತದೆ’ ಎಂದು ವ್ಯಂಗ್ಯಭರಿತ ಧಾಟಿಯಲ್ಲಿ ಹೇಳಿದ ಸಿಜೆಐ, ಅಕ್ಟೋಬರ್ ಮಧ್ಯದಲ್ಲಿ ವಿಚಾರಣೆಯ ಪಟ್ಟಿಗೆ ಸೇರಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>