<p><strong>ನವದೆಹಲಿ</strong>: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್–ಯುಜಿ 2024ರಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತಿತರ ಅಕ್ರಮಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 18ಕ್ಕೆ ಮುಂದೂಡಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಕೇಂದ್ರ ಸರ್ಕಾರ ಮತ್ತು ಪ್ರತಿಷ್ಠಿತ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು(ಎನ್ಟಿಎ) ಸುಪ್ರೀಂ ಕೋರ್ಟ್ನ ಜುಲೈ 8ರ ಆದೇಶಕ್ಕೆ ಅನುಸಾರವಾಗಿ ತಮ್ಮ ಅಫಿಡವಿಟ್ಗಳನ್ನು ಸಲ್ಲಿಸಿವೆ ಎಂದು ಹೇಳಿದೆ.</p><p>ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಕೆಲವು ಅರ್ಜಿದಾರರ ಪರ ಹಾಜರಾಗುವ ವಕೀಲರಿಗೆ ಕೇಂದ್ರ ಮತ್ತು ಎನ್ಟಿಎ ಸಲ್ಲಿಸಿದ ಅಫಿಡವಿಟ್ಗಳ ಕಾಪಿ ಇನ್ನೂ ತಲುಪಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು 18ಕ್ಕೆ ಮುಂದೂಡಿದೆ.</p><p>ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್ನಲ್ಲಿ ನೀಟ್ ಪರೀಕ್ಷೆಯಲ್ಲಿ ಅಕ್ರಮದ ಆರೋಪವನ್ನು ಸ್ಪಷ್ಟವಾಗಿ ವಿರೋಧಿಸಲಾಗಿದೆ. ಅಲ್ಲದೆ, ಕೆಲವು ಆಯ್ದ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅವ್ಯವಹಾರ ನಡೆದಿದೆ ಎಂಬ ಆರೋಪಗಳನ್ನು ಐಐಟಿ-ಮದ್ರಾಸ್ನ ಸಮಗ್ರ ವರದಿಯು ಅಲ್ಲಗಳೆದಿದೆ ಎಂಬುದನ್ನೂ ಉಲ್ಲೇಖಿಸಲಾಗಿದೆ. ಸಾಮೂಹಿಕ ಪರೀಕ್ಷಾ ಅಕ್ರಮ ಅಥವಾ ಸ್ಥಳೀಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟ ಆರೋಪಗಳಲ್ಲಿ ಹುರುಳಿಲ್ಲ ಎಂದು ತಿಳಿಸಲಾಗಿದೆ.</p><p>ನೀಟ್ ಪರೀಕ್ಷೆಯಲ್ಲಿ ಕೇವಲ 47 ವಿದ್ಯಾರ್ಥಿಗಳು ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಒಎಂಆರ್ ಶೀಟ್ ಅಕ್ರಮಗಳಲ್ಲಿ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ ಎಂದು ಎನ್ಟಿಎ ಸಹ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.</p><p>ಮೇ 5ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕೆಲವು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಕೃಪಾಂಕ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ 8 ಜನರನ್ನು ಬಂಧಿಸಿದೆ.</p><p><strong>ಅರ್ಜಿದಾರರ ಪರ ವಕೀಲರ ಮನವಿ</strong></p><p>ಈ ವೇಳೆ ಅರ್ಜಿದಾರರ ಪರ ವಕೀಲರು, ಇದೇ 15ರಂದು ವಿಚಾರಣೆ ನಡೆಸುವಂತೆ ಕೋರಿದರು. ಆ ದಿನ ತಾನು ಲಭ್ಯವಿರುವುದಿಲ್ಲ ಎಂದು ಮೆಹ್ತಾ ಅವರು ತಿಳಿಸಿದರು. ಬಳಿಕ ಪೀಠವು ಇದೇ 18ಕ್ಕೆ ವಿಚಾರಣೆ ನಿಗದಿಪಡಿಸಿತು.</p><p>‘ನೀಟ್–ಯುಜಿ’ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ಇಲ್ಲಿಯವರೆಗಿನ ತನಿಖೆಯ ಪ್ರಗತಿ ಕುರಿತ ಸ್ಥಿತಿಗತಿ ವರದಿ ಸಲ್ಲಿಸಿದೆ ಎಂದು ಪೀಠ ತಿಳಿಸಿತು.</p><p><strong>ಹೆಚ್ಚುವರಿ ಅಫಿಡವಿಟ್ನಲ್ಲಿ ಏನಿದೆ?:</strong></p><p>ಪ್ರಸಕ್ತ ಸಾಲಿನ ‘ನೀಟ್– ಯುಜಿ’ ಫಲಿತಾಂಶಗಳ ದತ್ತಾಂಶ ವಿಶ್ಲೇಷಣೆಯನ್ನು ಐಐಟಿ ಮದ್ರಾಸ್ ನಡೆಸಿದ್ದು, ಯಾವುದೇ ‘ಸಾಮೂಹಿಕ ನಕಲು’ ಅಥವಾ ನಿರ್ದಿಷ್ಟ ಸಂಖ್ಯೆಯ ಅಭ್ಯರ್ಥಿಗಳು ಲಾಭ ಪಡೆದಿರುವುದು ಕಂಡು ಬಂದಿಲ್ಲ ಎಂದು ಅದು ಹೇಳಿದೆ ಎಂಬುದನ್ನು ಅಫಿಡವಿಟ್ನಲ್ಲಿ ಉಲ್ಲೇಖಿಸಲಾಗಿದೆ.</p><p>ಮೇ 5ರಂದು ನಡೆದಿದ್ದ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರಗಳು ನಡೆದಿರುವುದು ಕಂಡುಬಂದರೆ ಮರು ಪರೀಕ್ಷೆಗೆ ಆದೇಶಿಸಬಹುದು ಎಂದು ಪೀಠವು ಜುಲೈ 8ರಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಅಫಿಡವಿಟ್ನಲ್ಲಿ ಸರ್ಕಾರ ನೀಡಿರುವ ಸಮರ್ಥನೆ ಮಹತ್ವ ಪಡೆದುಕೊಂಡಿದೆ. </p><p><strong>ನಾಲ್ಕು ಸುತ್ತು ಕೌನ್ಸೆಲಿಂಗ್:</strong></p><p>ಈ ವರ್ಷದ ವೈದ್ಯಕೀಯ ಕೋರ್ಸ್ಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಜುಲೈ ಮೂರನೇ ವಾರದಿಂದ ನಾಲ್ಕು ಸುತ್ತುಗಳಲ್ಲಿ ನಡೆಸಲಾಗುವುದು ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.</p><p>ಎನ್ಟಿಎ ಸಹ ಇದೇ ರೀತಿ ಪ್ರತ್ಯೇಕವಾಗಿ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದೆ. ರಾಷ್ಟ್ರೀಯ, ರಾಜ್ಯ ಮತ್ತು ನಗರ ಮಟ್ಟದಲ್ಲಿ ಅಭ್ಯರ್ಥಿಗಳ ಅಂಕಗಳ ವಿಶ್ಲೇಷಣೆ ನಡೆಸಲಾಗಿದೆ ಎಂದು ಅದು ಹೇಳಿದೆ.</p><p>ಅಂಕಗಳ ನೀಡಿಕೆ ಸಾಮಾನ್ಯವಾಗಿದೆ ಎಂಬುದನ್ನು ಈ ವಿಶ್ಲೇಷಣೆ ಸೂಚಿಸುತ್ತದೆ. ಅಲ್ಲದೆ ಅಂಕಗಳ ನೀಡಿಕೆ ಮೇಲೆ ಪ್ರಭಾವ ಬೀರುವ ಯಾವುದೇ ಬಾಹ್ಯ ಅಂಶಗಳು ಕಂಡುಬಂದಿಲ್ಲ ಎಂದು ಎನ್ಟಿಎ ತಿಳಿಸಿದೆ. ಜತೆಗೆ ಅದು ಪ್ರಶ್ನೆ ಪತ್ರಿಕೆಗಳ ಗೋಪ್ಯ ಮುದ್ರಣ, ಸಾಗಣೆ ಮತ್ತು ವಿತರಣೆ ವ್ಯವಸ್ಥೆಯ ವಿವರಗಳನ್ನೂ ಒದಗಿಸಿದೆ. </p><p>ಜುಲೈ 8ರ ವಿಚಾರಣೆ ವೇಳೆ ಪೀಠವು, ‘ನೀಟ್–ಯುಜಿ’ ಪರೀಕ್ಷೆಯ ಪಾವಿತ್ರ್ಯವು ಉಲ್ಲಂಘನೆಯಾಗಿದೆ ಎಂಬುದನ್ನು ಗಮನಿಸಿತ್ತು. ಇದು ಇಡೀ ಪರೀಕ್ಷಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಿದ್ದರೆ ಮರು ಪರೀಕ್ಷೆಗೆ ಆದೇಶಿಸಬಹುದು ಎಂದೂ ಪೀಠ ಹೇಳಿತ್ತು. </p><p>ಅಲ್ಲದೆ ಅಕ್ರಮಗಳಲ್ಲಿ ಭಾಗಿಯಾದವರು ಮತ್ತು ತಪ್ಪು ಮಾಡಿದವರ ಸಂಖ್ಯೆ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯ ಸಮಯ ಮತ್ತು ವಿಧಾನ ಸೇರಿದಂತೆ ವಿವರಗಳನ್ನು ಒದಗಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್–ಯುಜಿ 2024ರಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತಿತರ ಅಕ್ರಮಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 18ಕ್ಕೆ ಮುಂದೂಡಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಕೇಂದ್ರ ಸರ್ಕಾರ ಮತ್ತು ಪ್ರತಿಷ್ಠಿತ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು(ಎನ್ಟಿಎ) ಸುಪ್ರೀಂ ಕೋರ್ಟ್ನ ಜುಲೈ 8ರ ಆದೇಶಕ್ಕೆ ಅನುಸಾರವಾಗಿ ತಮ್ಮ ಅಫಿಡವಿಟ್ಗಳನ್ನು ಸಲ್ಲಿಸಿವೆ ಎಂದು ಹೇಳಿದೆ.</p><p>ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಕೆಲವು ಅರ್ಜಿದಾರರ ಪರ ಹಾಜರಾಗುವ ವಕೀಲರಿಗೆ ಕೇಂದ್ರ ಮತ್ತು ಎನ್ಟಿಎ ಸಲ್ಲಿಸಿದ ಅಫಿಡವಿಟ್ಗಳ ಕಾಪಿ ಇನ್ನೂ ತಲುಪಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು 18ಕ್ಕೆ ಮುಂದೂಡಿದೆ.</p><p>ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್ನಲ್ಲಿ ನೀಟ್ ಪರೀಕ್ಷೆಯಲ್ಲಿ ಅಕ್ರಮದ ಆರೋಪವನ್ನು ಸ್ಪಷ್ಟವಾಗಿ ವಿರೋಧಿಸಲಾಗಿದೆ. ಅಲ್ಲದೆ, ಕೆಲವು ಆಯ್ದ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅವ್ಯವಹಾರ ನಡೆದಿದೆ ಎಂಬ ಆರೋಪಗಳನ್ನು ಐಐಟಿ-ಮದ್ರಾಸ್ನ ಸಮಗ್ರ ವರದಿಯು ಅಲ್ಲಗಳೆದಿದೆ ಎಂಬುದನ್ನೂ ಉಲ್ಲೇಖಿಸಲಾಗಿದೆ. ಸಾಮೂಹಿಕ ಪರೀಕ್ಷಾ ಅಕ್ರಮ ಅಥವಾ ಸ್ಥಳೀಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟ ಆರೋಪಗಳಲ್ಲಿ ಹುರುಳಿಲ್ಲ ಎಂದು ತಿಳಿಸಲಾಗಿದೆ.</p><p>ನೀಟ್ ಪರೀಕ್ಷೆಯಲ್ಲಿ ಕೇವಲ 47 ವಿದ್ಯಾರ್ಥಿಗಳು ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಒಎಂಆರ್ ಶೀಟ್ ಅಕ್ರಮಗಳಲ್ಲಿ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ ಎಂದು ಎನ್ಟಿಎ ಸಹ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.</p><p>ಮೇ 5ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕೆಲವು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಕೃಪಾಂಕ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ 8 ಜನರನ್ನು ಬಂಧಿಸಿದೆ.</p><p><strong>ಅರ್ಜಿದಾರರ ಪರ ವಕೀಲರ ಮನವಿ</strong></p><p>ಈ ವೇಳೆ ಅರ್ಜಿದಾರರ ಪರ ವಕೀಲರು, ಇದೇ 15ರಂದು ವಿಚಾರಣೆ ನಡೆಸುವಂತೆ ಕೋರಿದರು. ಆ ದಿನ ತಾನು ಲಭ್ಯವಿರುವುದಿಲ್ಲ ಎಂದು ಮೆಹ್ತಾ ಅವರು ತಿಳಿಸಿದರು. ಬಳಿಕ ಪೀಠವು ಇದೇ 18ಕ್ಕೆ ವಿಚಾರಣೆ ನಿಗದಿಪಡಿಸಿತು.</p><p>‘ನೀಟ್–ಯುಜಿ’ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ಇಲ್ಲಿಯವರೆಗಿನ ತನಿಖೆಯ ಪ್ರಗತಿ ಕುರಿತ ಸ್ಥಿತಿಗತಿ ವರದಿ ಸಲ್ಲಿಸಿದೆ ಎಂದು ಪೀಠ ತಿಳಿಸಿತು.</p><p><strong>ಹೆಚ್ಚುವರಿ ಅಫಿಡವಿಟ್ನಲ್ಲಿ ಏನಿದೆ?:</strong></p><p>ಪ್ರಸಕ್ತ ಸಾಲಿನ ‘ನೀಟ್– ಯುಜಿ’ ಫಲಿತಾಂಶಗಳ ದತ್ತಾಂಶ ವಿಶ್ಲೇಷಣೆಯನ್ನು ಐಐಟಿ ಮದ್ರಾಸ್ ನಡೆಸಿದ್ದು, ಯಾವುದೇ ‘ಸಾಮೂಹಿಕ ನಕಲು’ ಅಥವಾ ನಿರ್ದಿಷ್ಟ ಸಂಖ್ಯೆಯ ಅಭ್ಯರ್ಥಿಗಳು ಲಾಭ ಪಡೆದಿರುವುದು ಕಂಡು ಬಂದಿಲ್ಲ ಎಂದು ಅದು ಹೇಳಿದೆ ಎಂಬುದನ್ನು ಅಫಿಡವಿಟ್ನಲ್ಲಿ ಉಲ್ಲೇಖಿಸಲಾಗಿದೆ.</p><p>ಮೇ 5ರಂದು ನಡೆದಿದ್ದ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರಗಳು ನಡೆದಿರುವುದು ಕಂಡುಬಂದರೆ ಮರು ಪರೀಕ್ಷೆಗೆ ಆದೇಶಿಸಬಹುದು ಎಂದು ಪೀಠವು ಜುಲೈ 8ರಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಅಫಿಡವಿಟ್ನಲ್ಲಿ ಸರ್ಕಾರ ನೀಡಿರುವ ಸಮರ್ಥನೆ ಮಹತ್ವ ಪಡೆದುಕೊಂಡಿದೆ. </p><p><strong>ನಾಲ್ಕು ಸುತ್ತು ಕೌನ್ಸೆಲಿಂಗ್:</strong></p><p>ಈ ವರ್ಷದ ವೈದ್ಯಕೀಯ ಕೋರ್ಸ್ಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಜುಲೈ ಮೂರನೇ ವಾರದಿಂದ ನಾಲ್ಕು ಸುತ್ತುಗಳಲ್ಲಿ ನಡೆಸಲಾಗುವುದು ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.</p><p>ಎನ್ಟಿಎ ಸಹ ಇದೇ ರೀತಿ ಪ್ರತ್ಯೇಕವಾಗಿ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದೆ. ರಾಷ್ಟ್ರೀಯ, ರಾಜ್ಯ ಮತ್ತು ನಗರ ಮಟ್ಟದಲ್ಲಿ ಅಭ್ಯರ್ಥಿಗಳ ಅಂಕಗಳ ವಿಶ್ಲೇಷಣೆ ನಡೆಸಲಾಗಿದೆ ಎಂದು ಅದು ಹೇಳಿದೆ.</p><p>ಅಂಕಗಳ ನೀಡಿಕೆ ಸಾಮಾನ್ಯವಾಗಿದೆ ಎಂಬುದನ್ನು ಈ ವಿಶ್ಲೇಷಣೆ ಸೂಚಿಸುತ್ತದೆ. ಅಲ್ಲದೆ ಅಂಕಗಳ ನೀಡಿಕೆ ಮೇಲೆ ಪ್ರಭಾವ ಬೀರುವ ಯಾವುದೇ ಬಾಹ್ಯ ಅಂಶಗಳು ಕಂಡುಬಂದಿಲ್ಲ ಎಂದು ಎನ್ಟಿಎ ತಿಳಿಸಿದೆ. ಜತೆಗೆ ಅದು ಪ್ರಶ್ನೆ ಪತ್ರಿಕೆಗಳ ಗೋಪ್ಯ ಮುದ್ರಣ, ಸಾಗಣೆ ಮತ್ತು ವಿತರಣೆ ವ್ಯವಸ್ಥೆಯ ವಿವರಗಳನ್ನೂ ಒದಗಿಸಿದೆ. </p><p>ಜುಲೈ 8ರ ವಿಚಾರಣೆ ವೇಳೆ ಪೀಠವು, ‘ನೀಟ್–ಯುಜಿ’ ಪರೀಕ್ಷೆಯ ಪಾವಿತ್ರ್ಯವು ಉಲ್ಲಂಘನೆಯಾಗಿದೆ ಎಂಬುದನ್ನು ಗಮನಿಸಿತ್ತು. ಇದು ಇಡೀ ಪರೀಕ್ಷಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಿದ್ದರೆ ಮರು ಪರೀಕ್ಷೆಗೆ ಆದೇಶಿಸಬಹುದು ಎಂದೂ ಪೀಠ ಹೇಳಿತ್ತು. </p><p>ಅಲ್ಲದೆ ಅಕ್ರಮಗಳಲ್ಲಿ ಭಾಗಿಯಾದವರು ಮತ್ತು ತಪ್ಪು ಮಾಡಿದವರ ಸಂಖ್ಯೆ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯ ಸಮಯ ಮತ್ತು ವಿಧಾನ ಸೇರಿದಂತೆ ವಿವರಗಳನ್ನು ಒದಗಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>