<p class="title"><strong>ನವದೆಹಲಿ (ಪಿಟಿಐ):</strong> ಬಳ್ಳಾರಿಯಲ್ಲಿ ಒಂದು ತಿಂಗಳು ನೆಲೆಸಲು, ಬಾಣಂತಿಯಾಗಿರುವ ಮಗಳನ್ನು ಭೇಟಿ ಮಾಡಲು ಅನುಮತಿ ಕೋರಿ ಗಣಿ ಉದ್ಯಮಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಅ.10ರಂದು ಆದೇಶ ನೀಡಲಿದೆ.</p>.<p class="title">ಬಹುಕೋಟಿ ಗಣಿ ಹಗರಣದಲ್ಲಿ ಬಂಧಿತರಾಗಿದ್ದ ರೆಡ್ಡಿ ಅವರಿಗೆ ಷರತ್ತಿಗೊಳಪಟ್ಟು 2015ರಲ್ಲಿ ಜಾಮೀನು ನೀಡಲಾಗಿತ್ತು. ಆಗ, ಸುಪ್ರೀಂ ಕೋರ್ಟ್ ವಿಧಿಸಿದ್ದ ಷರತ್ತುಗಳಲ್ಲಿ ಕರ್ನಾಟಕದ ಬಳ್ಳಾರಿ, ಆಂಧ್ರಪ್ರದೇಶದ ಕಡಪ, ಅನಂತಪುರಕ್ಕೆ ಭೇಟಿ ನೀಡಬಾರದು ಎಂಬುದು ಸೇರಿತ್ತು.</p>.<p>ನ್ಯಾಯಮೂರ್ತಿಗಳಾದ ಎಂ.ಆರ್.ಶಾ, ಕೃಷ್ಣಮುರಾರಿ ಅವರಿದ್ದ ನ್ಯಾಯಪೀಠವು, ನಿತ್ಯ ಪ್ರಕರಣದ ವಿಚಾರಣೆ ನಡೆಸುವಂತೆ ಕೆಳಹಂತದ ಕೋರ್ಟ್ಗೆ ಆದೇಶಿಸಿದ್ದು, ಸಾಕ್ಷಿಗಳು ಹಾಜರಿರುವಂತೆ ನೋಡಿಕೊಳ್ಳುವುದು ತನಿಖಾಧಿಕಾರಿಗಳ ಹೊಣೆಗಾರಿಕೆ ಎಂದೂ ಸೂಚಿಸಿತ್ತು.</p>.<p>ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯಂತೆ ಸಿಬಿಐ, ‘ಶಿಶುವಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದು, ತಾಯಿ ಮತ್ತು ಶಿಶು ಸದ್ಯ ಬಳ್ಳಾರಿಯಲ್ಲಿ ನೆಲೆಸಿದ್ದಾರೆ’ ಎಂದು ಮಾಹಿತಿ ನೀಡಿತು. ಶುಕ್ರವಾರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ಕೋರ್ಟ್ ಸಿಬಿಐಗೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ):</strong> ಬಳ್ಳಾರಿಯಲ್ಲಿ ಒಂದು ತಿಂಗಳು ನೆಲೆಸಲು, ಬಾಣಂತಿಯಾಗಿರುವ ಮಗಳನ್ನು ಭೇಟಿ ಮಾಡಲು ಅನುಮತಿ ಕೋರಿ ಗಣಿ ಉದ್ಯಮಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಅ.10ರಂದು ಆದೇಶ ನೀಡಲಿದೆ.</p>.<p class="title">ಬಹುಕೋಟಿ ಗಣಿ ಹಗರಣದಲ್ಲಿ ಬಂಧಿತರಾಗಿದ್ದ ರೆಡ್ಡಿ ಅವರಿಗೆ ಷರತ್ತಿಗೊಳಪಟ್ಟು 2015ರಲ್ಲಿ ಜಾಮೀನು ನೀಡಲಾಗಿತ್ತು. ಆಗ, ಸುಪ್ರೀಂ ಕೋರ್ಟ್ ವಿಧಿಸಿದ್ದ ಷರತ್ತುಗಳಲ್ಲಿ ಕರ್ನಾಟಕದ ಬಳ್ಳಾರಿ, ಆಂಧ್ರಪ್ರದೇಶದ ಕಡಪ, ಅನಂತಪುರಕ್ಕೆ ಭೇಟಿ ನೀಡಬಾರದು ಎಂಬುದು ಸೇರಿತ್ತು.</p>.<p>ನ್ಯಾಯಮೂರ್ತಿಗಳಾದ ಎಂ.ಆರ್.ಶಾ, ಕೃಷ್ಣಮುರಾರಿ ಅವರಿದ್ದ ನ್ಯಾಯಪೀಠವು, ನಿತ್ಯ ಪ್ರಕರಣದ ವಿಚಾರಣೆ ನಡೆಸುವಂತೆ ಕೆಳಹಂತದ ಕೋರ್ಟ್ಗೆ ಆದೇಶಿಸಿದ್ದು, ಸಾಕ್ಷಿಗಳು ಹಾಜರಿರುವಂತೆ ನೋಡಿಕೊಳ್ಳುವುದು ತನಿಖಾಧಿಕಾರಿಗಳ ಹೊಣೆಗಾರಿಕೆ ಎಂದೂ ಸೂಚಿಸಿತ್ತು.</p>.<p>ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯಂತೆ ಸಿಬಿಐ, ‘ಶಿಶುವಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದು, ತಾಯಿ ಮತ್ತು ಶಿಶು ಸದ್ಯ ಬಳ್ಳಾರಿಯಲ್ಲಿ ನೆಲೆಸಿದ್ದಾರೆ’ ಎಂದು ಮಾಹಿತಿ ನೀಡಿತು. ಶುಕ್ರವಾರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ಕೋರ್ಟ್ ಸಿಬಿಐಗೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>