<p><strong>ನವದೆಹಲಿ:</strong> ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಕುರಿತ ತೀರ್ಪನ್ನು ಸೋಮವಾರ ಪ್ರಕಟಿಸಲಿದೆ. </p>.<p>ಭ್ರಷ್ಟಾಚಾರ ಪ್ರಕರಣದಡಿ ಸಾರ್ವಜನಿಕ ಸೇವೆಯ ವ್ಯಕ್ತಿ ವಿರುದ್ಧ ತನಿಖೆಗೆ ಅನುಮತಿ ನೀಡುವುದಕ್ಕೆ ಈ ಅರ್ಜಿಗಳು ಪ್ರಾಥಮಿಕವಾಗಿ ಸಂಬಂಧಿಸಿವೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ, ಮನೋಜ್ ಮಿಶ್ರಾ ಅವರಿದ್ದ ಪೀಠ ಏ. 21ರಂದು ತೀರ್ಪು ಪ್ರಕಟಿಸಲಿದೆ. </p>.<div>ಯಡಿಯೂರಪ್ಪ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಸಿದ್ಧಾರ್ಥ ಲುಥಾರಾ ಅವರು, 'ಯಡಿಯೂರಪ್ಪ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಹಿಂದೆ ವಜಾ ಮಾಡಿತ್ತು. ಆದರೆ, ಅದನ್ನು ಪ್ರಶ್ನಿಸಲಾಗಿಲ್ಲ. ಇದೇ ಸ್ವರೂಪದ ಮತ್ತೊಂದು ದೂರನ್ನು ಕೆಳಹಂತದ ಕೋರ್ಟ್ ತಳ್ಳಿಹಾಕಿತ್ತು. ಆದರೆ, ಈ ಆದೇಶವನ್ನು ಹೈಕೋರ್ಟ್ ತಡೆಹಿಡಿದಿದೆ' ಎಂದು ತಿಳಿಸಿದರು.</div>.<div><br />'ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಯ ವಿರುದ್ಧ ತನಿಖೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಅನ್ವಯ ಪೂರ್ವಾನುಮತಿ ಅಗತ್ಯ ಎಂಬುದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ' ಎಂದು ತಿಳಿಸಿದರು. </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಕುರಿತ ತೀರ್ಪನ್ನು ಸೋಮವಾರ ಪ್ರಕಟಿಸಲಿದೆ. </p>.<p>ಭ್ರಷ್ಟಾಚಾರ ಪ್ರಕರಣದಡಿ ಸಾರ್ವಜನಿಕ ಸೇವೆಯ ವ್ಯಕ್ತಿ ವಿರುದ್ಧ ತನಿಖೆಗೆ ಅನುಮತಿ ನೀಡುವುದಕ್ಕೆ ಈ ಅರ್ಜಿಗಳು ಪ್ರಾಥಮಿಕವಾಗಿ ಸಂಬಂಧಿಸಿವೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ, ಮನೋಜ್ ಮಿಶ್ರಾ ಅವರಿದ್ದ ಪೀಠ ಏ. 21ರಂದು ತೀರ್ಪು ಪ್ರಕಟಿಸಲಿದೆ. </p>.<div>ಯಡಿಯೂರಪ್ಪ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಸಿದ್ಧಾರ್ಥ ಲುಥಾರಾ ಅವರು, 'ಯಡಿಯೂರಪ್ಪ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಹಿಂದೆ ವಜಾ ಮಾಡಿತ್ತು. ಆದರೆ, ಅದನ್ನು ಪ್ರಶ್ನಿಸಲಾಗಿಲ್ಲ. ಇದೇ ಸ್ವರೂಪದ ಮತ್ತೊಂದು ದೂರನ್ನು ಕೆಳಹಂತದ ಕೋರ್ಟ್ ತಳ್ಳಿಹಾಕಿತ್ತು. ಆದರೆ, ಈ ಆದೇಶವನ್ನು ಹೈಕೋರ್ಟ್ ತಡೆಹಿಡಿದಿದೆ' ಎಂದು ತಿಳಿಸಿದರು.</div>.<div><br />'ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಯ ವಿರುದ್ಧ ತನಿಖೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಅನ್ವಯ ಪೂರ್ವಾನುಮತಿ ಅಗತ್ಯ ಎಂಬುದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ' ಎಂದು ತಿಳಿಸಿದರು. </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>