ಕೇಂದ್ರೀಯ ವಿಸ್ತಾ ನವೀಕರಣ ಯೋಜನೆಯನ್ನು 2019 ಸೆಪ್ಟೆಂಬರ್ನಲ್ಲಿ ಘೋಷಿಸಲಾಗಿತ್ತು. ಇದರಲ್ಲಿ 900–1,200 ಸಂಸದರು ಕುಳಿತುಕೊಳ್ಳುವ ಸಾಮರ್ಥ್ಯವಿರುವ ತ್ರಿಭುಜಾಕಾರದ ನೂತನ ಸಂಸತ್ ಭವನ, ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿದಂತೆ ಹಲವು ಯೋಜನೆಗಳಿವೆ. ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಸಂಜೀವ್ ಖನ್ನಾ ಅವರಿದ್ದ ಪೀಠವು ಕಳೆದ ವರ್ಷ ನ.5ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.