<p><strong>ನವದೆಹಲಿ (ಪಿಟಿಐ):</strong> ದೇಶದಲ್ಲಿ ಕೋವಿಡ್ ಪರಿಸ್ಥಿತಿಯು ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ, ಪ್ರಕರಣಗಳನ್ನು ದಾಖಲಿಸಲು ಇದ್ದ ಕಾಲಮಿತಿಯನ್ನು ಸಡಿಲಿಸಿ ನೀಡಿದ್ದ ಆದೇಶ ಹಿಂಪಡೆಯಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.</p>.<p>ಈ ಮೊದಲು ಮಾರ್ಚ್ 15, 2020ರಿಂದ ಅನ್ವಯವಾಗುವಂತೆ ಪ್ರಕರಣಗಳನ್ನು ದಾಖಲಿಸಲು ಇದ್ದ ಕಾಲಮಿತಿ ನಿಯಮ ಜಾರಿಗೊಳಿಸುವುದರಿಂದ ವಿನಾಯಿತಿ ನೀಡಿ ಕೋರ್ಟ್ ನಿರ್ದೇಶನ ನೀಡಿತ್ತು.</p>.<p>ಕೋವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ,ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು ಏಪ್ರಿಲ್ 27, 2021ರಂದು ಆದೇಶ ಹೊರಡಿಸಿ, ಚುನಾವಣಾ ಅರ್ಜಿಗಳು ಸೇರಿ ಪ್ರಕರಣ ದಾಖಲಿಸಲು ನಿಗದಿಪಡಿಸಿದ್ದ ಕಾಲಮಿತಿಯನ್ನು ಸಡಿಲಿಸಿತ್ತು.</p>.<p>ಈ ಆದೇಶವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಹಿಂಪಡೆಯಲಾಗುವುದು. ತರುವಾರ 90 ದಿನಗಳ ಒಳಗೆ ಪ್ರಕರಣ ದಾಖಲಿಸಬೇಕು ಎಂಬ ನಿಯಮವೇ ಜಾರಿಯಲ್ಲಿರುತ್ತದೆ ಎಂದು ಪೀಠವು ಸ್ಪಷ್ಟಪಡಿಸಿತು. ಈ ಕುರಿತು ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೇಶದಲ್ಲಿ ಕೋವಿಡ್ ಪರಿಸ್ಥಿತಿಯು ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ, ಪ್ರಕರಣಗಳನ್ನು ದಾಖಲಿಸಲು ಇದ್ದ ಕಾಲಮಿತಿಯನ್ನು ಸಡಿಲಿಸಿ ನೀಡಿದ್ದ ಆದೇಶ ಹಿಂಪಡೆಯಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.</p>.<p>ಈ ಮೊದಲು ಮಾರ್ಚ್ 15, 2020ರಿಂದ ಅನ್ವಯವಾಗುವಂತೆ ಪ್ರಕರಣಗಳನ್ನು ದಾಖಲಿಸಲು ಇದ್ದ ಕಾಲಮಿತಿ ನಿಯಮ ಜಾರಿಗೊಳಿಸುವುದರಿಂದ ವಿನಾಯಿತಿ ನೀಡಿ ಕೋರ್ಟ್ ನಿರ್ದೇಶನ ನೀಡಿತ್ತು.</p>.<p>ಕೋವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ,ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು ಏಪ್ರಿಲ್ 27, 2021ರಂದು ಆದೇಶ ಹೊರಡಿಸಿ, ಚುನಾವಣಾ ಅರ್ಜಿಗಳು ಸೇರಿ ಪ್ರಕರಣ ದಾಖಲಿಸಲು ನಿಗದಿಪಡಿಸಿದ್ದ ಕಾಲಮಿತಿಯನ್ನು ಸಡಿಲಿಸಿತ್ತು.</p>.<p>ಈ ಆದೇಶವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಹಿಂಪಡೆಯಲಾಗುವುದು. ತರುವಾರ 90 ದಿನಗಳ ಒಳಗೆ ಪ್ರಕರಣ ದಾಖಲಿಸಬೇಕು ಎಂಬ ನಿಯಮವೇ ಜಾರಿಯಲ್ಲಿರುತ್ತದೆ ಎಂದು ಪೀಠವು ಸ್ಪಷ್ಟಪಡಿಸಿತು. ಈ ಕುರಿತು ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>