ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ, ಈ ಅರ್ಜಿಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸುವಂತೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರಿಗೆ ನಿರ್ದೇಶಿಸಿದೆ. ಹೈಕೋರ್ಟ್ ನ್ಯಾಯಪೀಠದ ಎದುರು ಈ ಕುರಿತು ಮನವಿ ಸಲ್ಲಿಸಲು ನೀವು ಸ್ವತಂತ್ರರಾಗಿದ್ದೀರಿ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಕಾಲಿನ್ ಗೊಂಸಾಲ್ವೆಸ್ ಅವರಿಗೆ ತಿಳಿಸಿದೆ.