<p><strong>ನವದೆಹಲಿ:</strong> ತಮಿಳುನಾಡು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಚ್.ಎಂ.ಜಯರಾಮ್ ಅವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಮೌಖಿಕ ಆದೇಶವನ್ನು ವಜಾ ಮಾಡಿರುವ ಸುಪ್ರೀಂ ಕೋರ್ಟ್, ಅಧಿಕಾರಿ ವಿರುದ್ಧದ ತನಿಖೆಯನ್ನು ಸಿಬಿ–ಸಿಐಡಿಗೆ ವರ್ಗಾವಣೆ ಮಾಡಿದೆ.</p>.<p>ಯುವತಿಯೊಬ್ಬರನ್ನು ಅಪಹರಿಸಲಾಗಿದ್ದ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಜಯರಾಮ್ ಅವರನ್ನು ತಮಿಳುನಾಡು ಸರ್ಕಾರ ಅಮಾನತು ಮಾಡಿತ್ತು. ಇದನ್ನು ಜಯರಾಮ್ ಪ್ರಶ್ನಿಸಿದ್ದರು. ಸರ್ಕಾರದ ಕ್ರಮಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿತ್ತು.</p>.<p>ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಮನ್ಮೋಹನ್ ಸಿಂಗ್ ಅವರು ಇದ್ದ ಪೀಠದಲ್ಲಿ ಗುರುವಾರ ಜಯರಾಮ್ ಅವರ ಅರ್ಜಿ ವಿಚಾರಣೆ ಮುಂದುವರೆದಾಗ, ತನಿಖೆ ಮುಗಿಯುವವರೆಗೂ ಅಮಾನತು ಮುಂದುವರೆಯಬೇಕೆಂದು ಬಯಸುವುದಾಗಿ ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಿತು.</p>.<p>ತಮಿಳುನಾಡು ಸರ್ಕಾರದ ಪರ ವಕೀಲ ಸಿದ್ದಾರ್ಥ ದವೆ ಅವರು, ‘ಎಡಿಜಿಪಿ ಜಯರಾಮ್ ಅವರ ವಿರುದ್ಧ ಅಪಹರಣ ಪ್ರಕರಣವಷ್ಟೇ ಅಲ್ಲದೇ ಮತ್ತಿತರ ಆರೋಪಗಳೂ ಇವೆ. ನಿಯಮಗಳ ಅನ್ವಯವೇ ಅಮಾನತು ಮಾಡಲಾಗಿದೆ’ ಎಂದು ವಾದ ಮಂಡಿಸಿದರು.</p>.<p>ಈ ವೇಳೆ, ಮತ್ತೊಂದು ಪೀಠಕ್ಕೆ ಅಪಹರಣ ಪ್ರಕರಣದ ವಿಚಾರಣೆ ವರ್ಗಾಯಿಸುವಂತೆಯೂ ಹೈಕೋರ್ಟ್ ನ್ಯಾಯಮೂರ್ತಿಗೆ ಪೀಠವು ಸೂಚಿಸಿತು.</p>.ತಮಿಳುನಾಡು ಎಡಿಜಿಪಿ ಅಮಾನತು; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮಿಳುನಾಡು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಚ್.ಎಂ.ಜಯರಾಮ್ ಅವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಮೌಖಿಕ ಆದೇಶವನ್ನು ವಜಾ ಮಾಡಿರುವ ಸುಪ್ರೀಂ ಕೋರ್ಟ್, ಅಧಿಕಾರಿ ವಿರುದ್ಧದ ತನಿಖೆಯನ್ನು ಸಿಬಿ–ಸಿಐಡಿಗೆ ವರ್ಗಾವಣೆ ಮಾಡಿದೆ.</p>.<p>ಯುವತಿಯೊಬ್ಬರನ್ನು ಅಪಹರಿಸಲಾಗಿದ್ದ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಜಯರಾಮ್ ಅವರನ್ನು ತಮಿಳುನಾಡು ಸರ್ಕಾರ ಅಮಾನತು ಮಾಡಿತ್ತು. ಇದನ್ನು ಜಯರಾಮ್ ಪ್ರಶ್ನಿಸಿದ್ದರು. ಸರ್ಕಾರದ ಕ್ರಮಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿತ್ತು.</p>.<p>ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಮನ್ಮೋಹನ್ ಸಿಂಗ್ ಅವರು ಇದ್ದ ಪೀಠದಲ್ಲಿ ಗುರುವಾರ ಜಯರಾಮ್ ಅವರ ಅರ್ಜಿ ವಿಚಾರಣೆ ಮುಂದುವರೆದಾಗ, ತನಿಖೆ ಮುಗಿಯುವವರೆಗೂ ಅಮಾನತು ಮುಂದುವರೆಯಬೇಕೆಂದು ಬಯಸುವುದಾಗಿ ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಿತು.</p>.<p>ತಮಿಳುನಾಡು ಸರ್ಕಾರದ ಪರ ವಕೀಲ ಸಿದ್ದಾರ್ಥ ದವೆ ಅವರು, ‘ಎಡಿಜಿಪಿ ಜಯರಾಮ್ ಅವರ ವಿರುದ್ಧ ಅಪಹರಣ ಪ್ರಕರಣವಷ್ಟೇ ಅಲ್ಲದೇ ಮತ್ತಿತರ ಆರೋಪಗಳೂ ಇವೆ. ನಿಯಮಗಳ ಅನ್ವಯವೇ ಅಮಾನತು ಮಾಡಲಾಗಿದೆ’ ಎಂದು ವಾದ ಮಂಡಿಸಿದರು.</p>.<p>ಈ ವೇಳೆ, ಮತ್ತೊಂದು ಪೀಠಕ್ಕೆ ಅಪಹರಣ ಪ್ರಕರಣದ ವಿಚಾರಣೆ ವರ್ಗಾಯಿಸುವಂತೆಯೂ ಹೈಕೋರ್ಟ್ ನ್ಯಾಯಮೂರ್ತಿಗೆ ಪೀಠವು ಸೂಚಿಸಿತು.</p>.ತಮಿಳುನಾಡು ಎಡಿಜಿಪಿ ಅಮಾನತು; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>