ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್, ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ಮತ್ತುಸುಧಾಂಶು ಧುಲಿಯಾಅವರ ನೇತೃತ್ವದ ಪೀಠವು, ಈ ಯೋಜನೆಯಲ್ಲಿದ್ದ ಕೆಲವು ನಿಬಂಧನೆಗಳನ್ನು ಕೈಬಿಟ್ಟು, ಸೇವೆಯಲ್ಲಿರುವ ಉದ್ಯೋಗಿಗಳಿಗೆ ಯೋಜನೆಯ ಲಾಭ ಪಡೆಯಲು ಅವಕಾಶ ಕಲ್ಪಿಸಿದೆ. ಪೀಠದ ಈ ಆದೇಶದಿಂದ ಉದ್ಯೋಗದಾತರು ಮತ್ತು ಉದ್ಯೋಗಿಗಳು ಯಾವುದೇ ಮಿತಿಯಿಲ್ಲದೇ ಪಿಂಚಣಿ ನಿಧಿಗೆ ವಂತಿಗೆ ನೀಡುವ ಅವಕಾಶ ಲಭಿಸಿದೆ.