<p><strong>ಮುಂಬೈ: </strong>ವಿವಾದಿತ ‘ತಾಂಡವ್’ ವೆಬ್ ಸರಣಿಯ ಎರಡು ದೃಶ್ಯಗಳಿಗೆ ಚಿತ್ರತಂಡ ಕತ್ತರಿ ಹಾಕಿದೆ.</p>.<p>ಸೈಫ್ ಅಲಿ ಖಾನ್ ಹಾಗೂ ಡಿಂಪಲ್ ಕಪಾಡಿಯಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸರಣಿಯು ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗುತ್ತಿದೆ.</p>.<p>ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಹಿಂದೂ ದೇವತೆಗಳನ್ನು ಅವಮಾನ ಮಾಡಿರುವ ಆರೋಪದಡಿ ಈ ಚಿತ್ರದ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬುಧವಾರ ಚಿತ್ರ ನಿರ್ಮಾತೃಗಳ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲಾಗಿದೆ. </p>.<p>ಸರಣಿಯ ಮೊದಲ ಎಪಿಸೋಡ್ನ (ತಾನಶಾ) ಒಂದು ದೃಶ್ಯ ಹಾಗೂ ಚಿತ್ರದಲ್ಲಿನ ಶಿವ ಹಾಗೂ ನಾರದ ಮುನಿ ಪಾತ್ರಧಾರಿಗಳ ನಡುವಣ ವಿವಾದಿತ ಸಂಭಾಷಣೆಯನ್ನು ತೆಗೆದು ಹಾಕಲಾಗಿದೆ. ಪ್ರಧಾನಿ ದೇವಕಿ ನಂದನ್ ಸಿಂಗ್ ಅವರು ದಲಿತ ನಾಯಕ ಕೈಲಾಸ್ ಕುಮಾರ್ ಅವರನ್ನು ನಿಂದಿಸುವ ಸಂಭಾಷಣೆಗೂ ಕತ್ತರಿ ಹಾಕಲಾಗಿದೆ.</p>.<p>‘ಅಲಿ ಅಬ್ಬಾಸ್ ಜಾಫರ್ ಅವರು ನಿರ್ದೇಶಿಸಿರುವ ವೆಬ್ ಸರಣಿಯ ವಿರುದ್ಧ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ. </p>.<p>ದೂರು ನೀಡಿದವರ ಹೆಸರನ್ನು ಅವರು ಬಹಿರಂಗಪಡಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ವಿವಾದಿತ ‘ತಾಂಡವ್’ ವೆಬ್ ಸರಣಿಯ ಎರಡು ದೃಶ್ಯಗಳಿಗೆ ಚಿತ್ರತಂಡ ಕತ್ತರಿ ಹಾಕಿದೆ.</p>.<p>ಸೈಫ್ ಅಲಿ ಖಾನ್ ಹಾಗೂ ಡಿಂಪಲ್ ಕಪಾಡಿಯಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸರಣಿಯು ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗುತ್ತಿದೆ.</p>.<p>ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಹಿಂದೂ ದೇವತೆಗಳನ್ನು ಅವಮಾನ ಮಾಡಿರುವ ಆರೋಪದಡಿ ಈ ಚಿತ್ರದ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬುಧವಾರ ಚಿತ್ರ ನಿರ್ಮಾತೃಗಳ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲಾಗಿದೆ. </p>.<p>ಸರಣಿಯ ಮೊದಲ ಎಪಿಸೋಡ್ನ (ತಾನಶಾ) ಒಂದು ದೃಶ್ಯ ಹಾಗೂ ಚಿತ್ರದಲ್ಲಿನ ಶಿವ ಹಾಗೂ ನಾರದ ಮುನಿ ಪಾತ್ರಧಾರಿಗಳ ನಡುವಣ ವಿವಾದಿತ ಸಂಭಾಷಣೆಯನ್ನು ತೆಗೆದು ಹಾಕಲಾಗಿದೆ. ಪ್ರಧಾನಿ ದೇವಕಿ ನಂದನ್ ಸಿಂಗ್ ಅವರು ದಲಿತ ನಾಯಕ ಕೈಲಾಸ್ ಕುಮಾರ್ ಅವರನ್ನು ನಿಂದಿಸುವ ಸಂಭಾಷಣೆಗೂ ಕತ್ತರಿ ಹಾಕಲಾಗಿದೆ.</p>.<p>‘ಅಲಿ ಅಬ್ಬಾಸ್ ಜಾಫರ್ ಅವರು ನಿರ್ದೇಶಿಸಿರುವ ವೆಬ್ ಸರಣಿಯ ವಿರುದ್ಧ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ. </p>.<p>ದೂರು ನೀಡಿದವರ ಹೆಸರನ್ನು ಅವರು ಬಹಿರಂಗಪಡಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>