ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಉದ್ಯೋಗ ಹಗರಣ: ಮೇ 2ಕ್ಕೆ ಮೊದಲು ತೀರ್ಮಾನ ಕೈಗೊಳ್ಳಲು ತಾಕೀತು

Published 23 ಏಪ್ರಿಲ್ 2024, 15:41 IST
Last Updated 23 ಏಪ್ರಿಲ್ 2024, 15:41 IST
ಅಕ್ಷರ ಗಾತ್ರ

ಕೋಲ್ಕತ್ತ: 2016ರ ಶಾಲಾ ಉದ್ಯೋಗ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ ಮಾಜಿ ಸರ್ಕಾರಿ ಉದ್ಯೋಗಿಗಳ ವಿರುದ್ಧ ಕ್ರಮ ಜರುಗಿಸಲು ಅನುಮತಿ ನೀಡುವ ಬಗ್ಗೆ ಮೇ 2ಕ್ಕೆ ಮೊದಲು ತೀರ್ಮಾನ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ಕಲ್ಕತ್ತ ಹೈಕೋರ್ಟ್‌ ಮಂಗಳವಾರ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಸಾವಿರಕ್ಕೂ ಹೆಚ್ಚಿನ ನೇಮಕಾತಿಗಳನ್ನು ಸೋಮವಾರ ರದ್ದುಪ‍ಡಿಸಲಾಗಿದೆ. ಮಂಗಳವಾರದ ಸೂಚನೆಯನ್ನು ಪಾಲಿಸಲು ಮುಖ್ಯ ಕಾರ್ಯದರ್ಶಿ ವಿಫಲರಾದಲ್ಲಿ ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಕೋರ್ಟ್ ಮುಂದಾಗಬೇಕಾಗುತ್ತದೆ ಎಂದು ವಿಭಾಗೀಯ ಪೀಠವು ಹೇಳಿದೆ.

ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳಿಗೆ ನಡೆದ ನೇಮಕಾತಿಗಳನ್ನು ಇದೇ ಕೋರ್ಟ್‌ನ ಇನ್ನೊಂದು ವಿಭಾಗೀಯ ಪೀಠವು ಸೋಮವಾರ ರದ್ದುಪಡಿಸಿದೆ. 

ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯು 2022ರಿಂದಲೂ ಬಾಕಿ ಇದೆ ಎಂದು ಹೇಳಿರುವ ನ್ಯಾಯಮೂರ್ತಿ ಜಯಮಾಲಾ ಬಾಗ್ಚಿ ನೇತೃತ್ವದ ವಿಭಾಗೀಯ ಪೀಠವು, ಮುಖ್ಯ ಕಾರ್ಯದರ್ಶಿಯವರಿಗೆ ಈ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT