<p><strong>ವಾರಾಣಸಿ</strong>: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯು, ದೇವಾಲಯದ ಮೇಲೆ ನಿರ್ಮಾಣವಾಗಿದೆಯೇ ಎಂಬುದರ ನಿರ್ಣಯಕ್ಕಾಗಿ ವೈಜ್ಞಾನಿಕ ಸಮೀಕ್ಷೆ ಸೋಮವಾರ ಬೆಳಿಗ್ಗೆ ಆರಂಭವಾಗಿದೆ.</p><p>ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು (ASI– Archaeological Survey of India) ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದಾರೆ.</p><p>ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿದೆ. ಸ್ಥಳದಲ್ಲಿ ಪ್ರಕರಣದ ಅರ್ಜಿದಾರರೆಲ್ಲರ ವಕೀಲರು ಹಾಜರಿದ್ದಾರೆ. ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್ ವಾದ ಮಂಡಿಸುತ್ತಿದ್ದಾರೆ.</p>.<p>ಇದು ಐತಿಹಾಸಿಕ ದಿನ. ವಿಜ್ಞಾನವು ನಮ್ಮ ನಂಬಿಕೆಯನ್ನು ಒಗ್ಗೂಡಿಸುತ್ತದೆ ಎಂದು ಹಿಂದೂಗಳ ಪರವಾಗಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಹಾಗೂ ಸಮೀಕ್ಷೆ ನಡೆಯುವ ಸ್ಥಳದಲ್ಲಿದ್ದ ಸೀತಾ ಸಾಹು ಪಿಟಿಐಗೆ ತಿಳಿಸಿದ್ದಾರೆ.</p><p>ಮಸೀದಿಯ ವಿವರವಾದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ವಾರಾಣಸಿಯ ಜಿಲ್ಲಾ ನ್ಯಾಯಾಲಯ ಶುಕ್ರವಾರ ಪುರಾತತ್ವ ಇಲಾಖೆಗೆ ಸೂಚನೆ ನೀಡಿತ್ತು. ಅಗತ್ಯ ಎದುರಾದರೆ ಉತ್ಖನನ ನಡೆಸುವಂತೆಯೂ ತಿಳಿಸಿತ್ತು. </p><p>ವಿಡಿಯೊ, ಫೊಟೊಗಳ ಸಹಿತ ವಿವರವಾದ ವರದಿಯನ್ನು ಆಗಸ್ಟ್ 4ರ ಒಳಗಾಗಿ ಸಲ್ಲಿಸುವಂತೆ ನ್ಯಾಯಾಲಯವು ಪುರಾತತ್ವ ಇಲಾಖೆಗೆ ತಿಳಿಸಿದೆ. </p><p>ಮಸೀದಿಯ ‘ವಝುಖಾನಾ’ದಲ್ಲಿ ‘ಶಿವಲಿಂಗ’ದಂಥ ರಚನೆ ಇದೆ ಎಂದು ಹೇಳಲಾಗಿದ್ದು, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶಿಸಿದೆ. ಹೀಗಾಗಿ ನಿರ್ದಿಷ್ಟ ಜಾಗದಲ್ಲಿ ಸಮೀಕ್ಷೆ ನಡೆಯುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ</strong>: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯು, ದೇವಾಲಯದ ಮೇಲೆ ನಿರ್ಮಾಣವಾಗಿದೆಯೇ ಎಂಬುದರ ನಿರ್ಣಯಕ್ಕಾಗಿ ವೈಜ್ಞಾನಿಕ ಸಮೀಕ್ಷೆ ಸೋಮವಾರ ಬೆಳಿಗ್ಗೆ ಆರಂಭವಾಗಿದೆ.</p><p>ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು (ASI– Archaeological Survey of India) ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದಾರೆ.</p><p>ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿದೆ. ಸ್ಥಳದಲ್ಲಿ ಪ್ರಕರಣದ ಅರ್ಜಿದಾರರೆಲ್ಲರ ವಕೀಲರು ಹಾಜರಿದ್ದಾರೆ. ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್ ವಾದ ಮಂಡಿಸುತ್ತಿದ್ದಾರೆ.</p>.<p>ಇದು ಐತಿಹಾಸಿಕ ದಿನ. ವಿಜ್ಞಾನವು ನಮ್ಮ ನಂಬಿಕೆಯನ್ನು ಒಗ್ಗೂಡಿಸುತ್ತದೆ ಎಂದು ಹಿಂದೂಗಳ ಪರವಾಗಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಹಾಗೂ ಸಮೀಕ್ಷೆ ನಡೆಯುವ ಸ್ಥಳದಲ್ಲಿದ್ದ ಸೀತಾ ಸಾಹು ಪಿಟಿಐಗೆ ತಿಳಿಸಿದ್ದಾರೆ.</p><p>ಮಸೀದಿಯ ವಿವರವಾದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ವಾರಾಣಸಿಯ ಜಿಲ್ಲಾ ನ್ಯಾಯಾಲಯ ಶುಕ್ರವಾರ ಪುರಾತತ್ವ ಇಲಾಖೆಗೆ ಸೂಚನೆ ನೀಡಿತ್ತು. ಅಗತ್ಯ ಎದುರಾದರೆ ಉತ್ಖನನ ನಡೆಸುವಂತೆಯೂ ತಿಳಿಸಿತ್ತು. </p><p>ವಿಡಿಯೊ, ಫೊಟೊಗಳ ಸಹಿತ ವಿವರವಾದ ವರದಿಯನ್ನು ಆಗಸ್ಟ್ 4ರ ಒಳಗಾಗಿ ಸಲ್ಲಿಸುವಂತೆ ನ್ಯಾಯಾಲಯವು ಪುರಾತತ್ವ ಇಲಾಖೆಗೆ ತಿಳಿಸಿದೆ. </p><p>ಮಸೀದಿಯ ‘ವಝುಖಾನಾ’ದಲ್ಲಿ ‘ಶಿವಲಿಂಗ’ದಂಥ ರಚನೆ ಇದೆ ಎಂದು ಹೇಳಲಾಗಿದ್ದು, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶಿಸಿದೆ. ಹೀಗಾಗಿ ನಿರ್ದಿಷ್ಟ ಜಾಗದಲ್ಲಿ ಸಮೀಕ್ಷೆ ನಡೆಯುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>