<p><strong>ನವದೆಹಲಿ</strong>: ಬೈಯುವುದು ಆತ್ಮಹತ್ಯೆಗೆ ಪ್ರಚೋದಿಸಿದಂತಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಬೈದದ್ದಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಶಿಕ್ಷಕನನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.</p><p>ಶಾಲೆ ಮತ್ತು ಹಾಸ್ಟೆಲ್ ಮೇಲ್ವಿಚಾರಕನೂ ಆಗಿರುವ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ ದೂರನ್ನು ಕೇಳಿ ವಿದ್ಯಾರ್ಥಿಗೆ ಬೈದಿದ್ದ. ಇದರಿಂದ ಮನನೊಂದ ವಿದ್ಯಾರ್ಥಿ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.</p><p>ಈ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಆರೋಪಿ ವಿರುದ್ಧದ ಪ್ರಕರಣ ಕೈ ಬಿಡಲು ನಿರಾಕರಿಸಿತ್ತು.</p><p>ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಅಸಾದುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ, ಗದರುವುದರಿಂದ ಇಷ್ಟೊಂದು ದೊಡ್ಡ ಪ್ರಮಾದ ಸಂಭವಿಸುತ್ತದೆ ಎಂದು ಯಾರೂ ಊಹಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಜತೆಗೆ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿತು.</p><p>‘ವಿದ್ಯಾರ್ಥಿಯು ತಪ್ಪನ್ನು ಮತ್ತೆ ಮಾಡದಂತೆ ನೋಡಿಕೊಳ್ಳಲು ಮತ್ತು ಹಾಸ್ಟೆಲ್ನಲ್ಲಿ ಶಾಂತಿ ಕಾಪಾಡಲು ಮೇಲ್ವಿಚಾರಕನಾಗಿ ಗದರಿಸುವುದು ಅವರ ಕರ್ತವ್ಯವಾಗಿತ್ತು. ಮೃತ ವಿದ್ಯಾರ್ಥಿಯ ಮತ್ತು ಆರೋಪಿಯ ನಡುವೆ ಯಾವುದೇ ರೀತಿಯ ವೈಯಕ್ತಿಕ ದ್ವೇಷವಿರಲಿಲ್ಲ’ ಎಂದು ಆರೋಪಿಯ ಪರ ವಕೀಲರು ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೈಯುವುದು ಆತ್ಮಹತ್ಯೆಗೆ ಪ್ರಚೋದಿಸಿದಂತಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಬೈದದ್ದಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಶಿಕ್ಷಕನನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.</p><p>ಶಾಲೆ ಮತ್ತು ಹಾಸ್ಟೆಲ್ ಮೇಲ್ವಿಚಾರಕನೂ ಆಗಿರುವ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ ದೂರನ್ನು ಕೇಳಿ ವಿದ್ಯಾರ್ಥಿಗೆ ಬೈದಿದ್ದ. ಇದರಿಂದ ಮನನೊಂದ ವಿದ್ಯಾರ್ಥಿ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.</p><p>ಈ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಆರೋಪಿ ವಿರುದ್ಧದ ಪ್ರಕರಣ ಕೈ ಬಿಡಲು ನಿರಾಕರಿಸಿತ್ತು.</p><p>ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಅಸಾದುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ, ಗದರುವುದರಿಂದ ಇಷ್ಟೊಂದು ದೊಡ್ಡ ಪ್ರಮಾದ ಸಂಭವಿಸುತ್ತದೆ ಎಂದು ಯಾರೂ ಊಹಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಜತೆಗೆ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿತು.</p><p>‘ವಿದ್ಯಾರ್ಥಿಯು ತಪ್ಪನ್ನು ಮತ್ತೆ ಮಾಡದಂತೆ ನೋಡಿಕೊಳ್ಳಲು ಮತ್ತು ಹಾಸ್ಟೆಲ್ನಲ್ಲಿ ಶಾಂತಿ ಕಾಪಾಡಲು ಮೇಲ್ವಿಚಾರಕನಾಗಿ ಗದರಿಸುವುದು ಅವರ ಕರ್ತವ್ಯವಾಗಿತ್ತು. ಮೃತ ವಿದ್ಯಾರ್ಥಿಯ ಮತ್ತು ಆರೋಪಿಯ ನಡುವೆ ಯಾವುದೇ ರೀತಿಯ ವೈಯಕ್ತಿಕ ದ್ವೇಷವಿರಲಿಲ್ಲ’ ಎಂದು ಆರೋಪಿಯ ಪರ ವಕೀಲರು ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>