ಮುಂಬೈ: ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ವ್ಯಕ್ತಿ ಮೇಲೆ ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ, ಎಸ್ಸಿ,ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅನ್ವಯವಾಗುತ್ತದೆ. ಕಾಯ್ದೆಯಡಿ ರಕ್ಷಣೆ ಪಡೆಯಲು ಆತ ಅರ್ಹ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ.
ದೇಶದ ಯಾವುದೇ ಭಾಗದಲ್ಲಿ ಪರಿಶಿಷ್ಟ ವ್ಯಕ್ತಿ ಮೇಲೆ ದೌರ್ಜನ್ಯ ನಡೆದಿರಲಿ, ಕೃತ್ಯ ನಡೆದ ರಾಜ್ಯದಲ್ಲಿ ಆತನನ್ನು ಎಸ್ಸಿ ಅಥವಾ ಎಸ್ಟಿ ಎಂದು ಪರಿಗಣಿಸದಿದ್ದರೂ ಈ ಕಾಯ್ದೆಯಡಿ ಆ ವ್ಯಕ್ತಿಗೆ ರಕ್ಷಣೆ ನೀಡಬೇಕು ಎಂದೂ ಹೈಕೋರ್ಟ್ ಸ್ಪಷ್ಟಪಡಿಸಿದೆ.