ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ದೂರು ದಾಖಲಾದ ಆರೋಪಿಗೆ ನಿರೀಕ್ಷಣಾ ಜಾಮೀನುಅವಕಾಶ ಇರುವುದಿಲ್ಲ ಎಂಬುದು ಕಾಯ್ದೆಯಲ್ಲಿ ಇರುವ ಪ್ರಮುಖ ಪ್ರಸ್ತಾವವಾಗಿದೆ. ಹಾಗೆಯೇ ಪ್ರಕರಣ
ದಾಖಲಿಸಿಕೊಳ್ಳುವ ಮೊದಲು ಪೂರ್ವಭಾವಿ ತನಿಖೆ ಮಾಡಬೇಕು ಮತ್ತು ಬಂಧನಕ್ಕೆ ಮೊದಲು ಸಂಬಂಧಪಟ್ಟ ಪ್ರಾಧಿಕಾರದ ಅನುಮತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಲಾಗಿತ್ತು. ಇದನ್ನು ರದ್ದುಪಡಿಸುವ ಪ್ರಸ್ತಾವ ಮಸೂದೆಯಲ್ಲಿ ಇದೆ.