<p><strong>ನವದೆಹಲಿ</strong>: ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಪರಾಮರ್ಶೆ ನಡೆಸುವುದಕ್ಕಾಗಿ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಎರಡನೇ ಸಭೆ ಜನವರಿ 31ರಂದು ನಡೆಯಲಿದೆ.</p>.<p>ಈ ಬಗ್ಗೆ ಲೋಕಸಭೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ತಿದ್ದುಪಡಿ ಮಸೂದೆಗಳ ಪರಾಮರ್ಶೆಗೆ ಸಂಬಂಧಿಸಿದ ಪ್ರಕ್ರಿಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ತಿಳಿಸಲಾಗಿದೆ.</p>.<p>ಸಂವಿಧಾನ (129ನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆಗಳು(ತಿದ್ದುಪಡಿ) ಮಸೂದೆಗಳನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ನಂತರ, ಅವುಗಳನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಲಾಗಿತ್ತು.</p>.<p>ಜ.8ರಂದು ನಡೆದಿದ್ದ ಸಮಿತಿಯ ಮೊದಲ ಸಭೆಯಲ್ಲಿ, ಕಾನೂನು ಮತ್ತು ನ್ಯಾಯ ಸಚಿವಾಲಯದ ಪ್ರತಿನಿಧಿಗಳು ಹಾಜರಾಗಿ, ಸಮಿತಿ ಸದಸ್ಯರಿಗೆ ವಿವರಣೆ ನೀಡಿದ್ದರು.</p>.<p>ಕೆಲ ವಿವಾದಾತ್ಮಕ ಅಂಶಗಳ ಕುರಿತು ಈ ಮೊದಲ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿತ್ತು. ಅದರಲ್ಲೂ, ಏಕಕಾಲಕ್ಕೆ ಚುನಾವಣೆಗಳನ್ನು ನಡೆಸಬೇಕು ಎಂಬ ಪರಿಕಲ್ಪನೆಯು ಸಂವಿಧಾನದ ಮೂಲ ಸ್ವರೂಪ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಎಂಬುದಾಗಿ ಸಮಿತಿಯಲ್ಲಿರುವ ವಿಪಕ್ಷಗಳ ಸದಸ್ಯರು ಟೀಕಿಸಿದ್ದರು.</p>.<p>ಬಿಜೆಪಿ ಸಂಸದ ಪಿ.ಪಿ.ಚೌಧರಿ ನೇತೃತ್ವದ ಜಂಟಿ ಸದನ ಸಮಿತಿಯಲ್ಲಿ, 27 ಲೋಕಸಭೆ ಸಂಸದರು ಹಾಗೂ 12 ರಾಜ್ಯಸಭೆ ಸಂಸದರು ಸೇರಿ 39 ಸದಸ್ಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಪರಾಮರ್ಶೆ ನಡೆಸುವುದಕ್ಕಾಗಿ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಎರಡನೇ ಸಭೆ ಜನವರಿ 31ರಂದು ನಡೆಯಲಿದೆ.</p>.<p>ಈ ಬಗ್ಗೆ ಲೋಕಸಭೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ತಿದ್ದುಪಡಿ ಮಸೂದೆಗಳ ಪರಾಮರ್ಶೆಗೆ ಸಂಬಂಧಿಸಿದ ಪ್ರಕ್ರಿಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ತಿಳಿಸಲಾಗಿದೆ.</p>.<p>ಸಂವಿಧಾನ (129ನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆಗಳು(ತಿದ್ದುಪಡಿ) ಮಸೂದೆಗಳನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ನಂತರ, ಅವುಗಳನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಲಾಗಿತ್ತು.</p>.<p>ಜ.8ರಂದು ನಡೆದಿದ್ದ ಸಮಿತಿಯ ಮೊದಲ ಸಭೆಯಲ್ಲಿ, ಕಾನೂನು ಮತ್ತು ನ್ಯಾಯ ಸಚಿವಾಲಯದ ಪ್ರತಿನಿಧಿಗಳು ಹಾಜರಾಗಿ, ಸಮಿತಿ ಸದಸ್ಯರಿಗೆ ವಿವರಣೆ ನೀಡಿದ್ದರು.</p>.<p>ಕೆಲ ವಿವಾದಾತ್ಮಕ ಅಂಶಗಳ ಕುರಿತು ಈ ಮೊದಲ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿತ್ತು. ಅದರಲ್ಲೂ, ಏಕಕಾಲಕ್ಕೆ ಚುನಾವಣೆಗಳನ್ನು ನಡೆಸಬೇಕು ಎಂಬ ಪರಿಕಲ್ಪನೆಯು ಸಂವಿಧಾನದ ಮೂಲ ಸ್ವರೂಪ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಎಂಬುದಾಗಿ ಸಮಿತಿಯಲ್ಲಿರುವ ವಿಪಕ್ಷಗಳ ಸದಸ್ಯರು ಟೀಕಿಸಿದ್ದರು.</p>.<p>ಬಿಜೆಪಿ ಸಂಸದ ಪಿ.ಪಿ.ಚೌಧರಿ ನೇತೃತ್ವದ ಜಂಟಿ ಸದನ ಸಮಿತಿಯಲ್ಲಿ, 27 ಲೋಕಸಭೆ ಸಂಸದರು ಹಾಗೂ 12 ರಾಜ್ಯಸಭೆ ಸಂಸದರು ಸೇರಿ 39 ಸದಸ್ಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>