<p class="title"><strong>ನವದೆಹಲಿ: </strong>ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ದೇಶಕ್ಕೆ ಕರೆತರಲು ಗೋಪ್ಯವಾಗಿ ಹಸ್ತಾಂತರ ಮಾಡಿಕೊಳ್ಳುವ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತು.</p>.<p class="title">ಆದರೆ, ಈ ಪ್ರಕ್ರಿಯೆಯಲ್ಲಿ ತಾನು ಭಾಗಿಯಾಗಿಲ್ಲ ಎಂದು ಕೇಂದ್ರ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿತು. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಅಶೋಕ್ ಭೂಷಣ್ ಅವರಿದ್ದ ಪೀಠವು, ‘ಹಸ್ತಾಂತರಕ್ಕೆ ಯಾವ ರೀತಿಯ ಗೋಪ್ಯ ಪ್ರಕ್ರಿಯೆ ನಡೆದಿದೆ ಎಂದು ತಿಳಿಸುವಂತೆ’ ಮಲ್ಯ ಪರ ವಕೀಲರಿಗೆ ಸೂಚಿಸಿತು.</p>.<p>ಮಲ್ಯ ಪರ ಹಾಜರಿದ್ದ ವಕೀಲ ಅಂಕುರ್ ಸೈಗಲ್ ಅವರು, ‘ಈ ಕುರಿತು ನನಗೆ ಮಾಹಿತಿ ಇಲ್ಲ. ಹಸ್ತಾಂತರ ಕುರಿತಂತೆ ಇದ್ದ ಮನವಿಯನ್ನು ತಳ್ಳಿಹಾಕಲಾಗಿದೆ ಎಂಬುದಷ್ಟೇ ನನಗಿರುವ ಮಾಹಿತಿ’ ಎಂದು ತಿಳಿಸಿದರು.</p>.<p>‘ಮಲ್ಯ ಅವರು ಎಂದು ಕೋರ್ಟ್ಗೆ ಹಾಜರಾಗಲಿದ್ದಾರೆ, ಗೋಪ್ಯ ಪ್ರಕ್ರಿಯೆ ಎಂದು ಮುಗಿಯಲಿದೆ ಎಂಬ ಮಾಹಿತಿಯನ್ನು ನವೆಂಬರ್ 2ರಂದು ತಿಳಿಸಬೇಕು’ ಎಂದು ಪೀಠವು ವಕೀಲರಿಗೆ ಸೂಚಿಸಿತು.</p>.<p>ತಮ್ಮ ಮಾಲೀಕತ್ವದ ಕಿಂಗ್ಫಿಷರ್ ಏರ್ಲೈನ್ಸ್ಗೆ ₹ 9000 ಕೋಟಿ ಬ್ಯಾಂಕ್ ಸಾಲ ಪಡೆದು ವಂಚಿಸಿದ ಆರೋಪ ಮಲ್ಯ ಮೇಲಿದ್ದು, ಸದ್ಯ ಯು.ಕೆ.ಯಲ್ಲಿ ತಲೆಮರೆಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ದೇಶಕ್ಕೆ ಕರೆತರಲು ಗೋಪ್ಯವಾಗಿ ಹಸ್ತಾಂತರ ಮಾಡಿಕೊಳ್ಳುವ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತು.</p>.<p class="title">ಆದರೆ, ಈ ಪ್ರಕ್ರಿಯೆಯಲ್ಲಿ ತಾನು ಭಾಗಿಯಾಗಿಲ್ಲ ಎಂದು ಕೇಂದ್ರ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿತು. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಅಶೋಕ್ ಭೂಷಣ್ ಅವರಿದ್ದ ಪೀಠವು, ‘ಹಸ್ತಾಂತರಕ್ಕೆ ಯಾವ ರೀತಿಯ ಗೋಪ್ಯ ಪ್ರಕ್ರಿಯೆ ನಡೆದಿದೆ ಎಂದು ತಿಳಿಸುವಂತೆ’ ಮಲ್ಯ ಪರ ವಕೀಲರಿಗೆ ಸೂಚಿಸಿತು.</p>.<p>ಮಲ್ಯ ಪರ ಹಾಜರಿದ್ದ ವಕೀಲ ಅಂಕುರ್ ಸೈಗಲ್ ಅವರು, ‘ಈ ಕುರಿತು ನನಗೆ ಮಾಹಿತಿ ಇಲ್ಲ. ಹಸ್ತಾಂತರ ಕುರಿತಂತೆ ಇದ್ದ ಮನವಿಯನ್ನು ತಳ್ಳಿಹಾಕಲಾಗಿದೆ ಎಂಬುದಷ್ಟೇ ನನಗಿರುವ ಮಾಹಿತಿ’ ಎಂದು ತಿಳಿಸಿದರು.</p>.<p>‘ಮಲ್ಯ ಅವರು ಎಂದು ಕೋರ್ಟ್ಗೆ ಹಾಜರಾಗಲಿದ್ದಾರೆ, ಗೋಪ್ಯ ಪ್ರಕ್ರಿಯೆ ಎಂದು ಮುಗಿಯಲಿದೆ ಎಂಬ ಮಾಹಿತಿಯನ್ನು ನವೆಂಬರ್ 2ರಂದು ತಿಳಿಸಬೇಕು’ ಎಂದು ಪೀಠವು ವಕೀಲರಿಗೆ ಸೂಚಿಸಿತು.</p>.<p>ತಮ್ಮ ಮಾಲೀಕತ್ವದ ಕಿಂಗ್ಫಿಷರ್ ಏರ್ಲೈನ್ಸ್ಗೆ ₹ 9000 ಕೋಟಿ ಬ್ಯಾಂಕ್ ಸಾಲ ಪಡೆದು ವಂಚಿಸಿದ ಆರೋಪ ಮಲ್ಯ ಮೇಲಿದ್ದು, ಸದ್ಯ ಯು.ಕೆ.ಯಲ್ಲಿ ತಲೆಮರೆಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>