<p><strong>ಲಖನೌ:</strong>ಸುಪ್ರೀಂ ಕೋರ್ಟ್ ನೀಡಲಿರುವ ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣದ ತೀರ್ಪು ಹಾಗೂ ಮುಂಬರಲಿರುವ ಧಾರ್ಮಿಕ ಆಚರಣೆಗಳನ್ನು ಗಮನದಲ್ಲಿರಿಸಿಕೊಂಡು ಅಯೋಧ್ಯೆಯಲ್ಲಿ ಡಿಸೆಂಬರ್ 10ರ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p>ಸಿಆರ್ಪಿಸಿ ಸೆಕ್ಷನ್ 144ರ ಅಡಿಯಲ್ಲಿ ಅಕ್ಟೋಬರ್ 12ರಿಂದಲೇ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನುಜ್ ಕುಮಾರ್ ಝಾ ತಿಳಿಸಿದ್ದಾರೆ.</p>.<p><a href="https://www.prajavani.net/tags/ayodhya-land-dispute" target="_blank">ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣ</a>ದ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, ಸೋಮವಾರದಿಂದ ಕೊನೆಯ ಹಂತದ ವಿಚಾರಣೆ ಆರಂಭವಾಗಲಿದೆ.ಪ್ರಕ್ರಿಯೆ ಪೂರ್ಣಗೊಳಿಸಲು ಅಕ್ಟೋಬರ್ 17ರ ಗಡುವು ನಿಗದಿಪಡಿಸಲಾಗಿದೆ.ನವೆಂಬರ್ 17ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/stories/national/vhp-expedites-stone-carving-659224.html" target="_blank">ಅಯೋಧ್ಯೆ: ಮಂದಿರಕ್ಕಾಗಿ ಕೆತ್ತನೆ ಕೆಲಸ ಚುರುಕು</a></p>.<p>ಜಿಲ್ಲಾಡಳಿತದಿಂದ ಅನುಮತಿ ಪಡೆಯದೆಯೇ ಅಯೋಧ್ಯೆಯಲ್ಲಿ ಡ್ರೋನ್ಗಳು ಮತ್ತು ಮಾನವ ರಹಿತ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಅಯೋಧ್ಯೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೋಣಿಗಳಲ್ಲಿ ಸಂಚರಿಸುವಂತಿಲ್ಲ. ದೀಪಾವಳಿ ಪ್ರಯುಕ್ತ ಪಟಾಕಿಗಳ ಉತ್ಪಾದನೆ ಮತ್ತು ಮಾರಾಟಕ್ಕಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.</p>.<p>ಅಯೋಧ್ಯೆ ಮತ್ತು ಅಯೋಧ್ಯೆಗೆ ಭೇಟಿ ನೀಡುವವರ ಸುರಕ್ಷತೆ ಮತ್ತು ಭದ್ರತಾ ಕಾರಣಗಳಿಂದಾಗಿ ಈ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಸುಪ್ರೀಂ ನೀಡಲಿರುವ ಅಯೋಧ್ಯೆ ತೀರ್ಪಿನ ಜತೆಗೆ ಹಲವು ಹಬ್ಬಗಳ ಆಚರಣೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದೀಪಾವಳಿ, ನರಕ ಚತುರ್ದಶಿ, ಗೋವರ್ಧನ ಪೂಜೆ, ಚಿತ್ರಗುಪ್ತ ಜಯಂತಿ, ಪಾಂಚ್ ಕೋಸಿ ಪರಿಕ್ರಮ, ಕಾರ್ತಿಕ ಪೂರ್ಣಿಮೆ ಮೇಳ, ಗುರು ನಾನಕ್ ಜಯಂತಿ, ಬಾರಾವ್ಫಾತ್,..ಸೇರಿದಂತೆ ಹಲವು ಆಚರಣೆಗಳು ನಡೆಯಲಿವೆ. ಡಿಸೆಂಬರ್ 6ರಂದು ಬಾಬರಿ ಬಸೀದಿ ಧ್ವಂಸಗೊಳಿಸಿದ ದಿನ.</p>.<p><strong>ಇದನ್ನೂ ಓದಿ:</strong> <a href="https://www.prajavani.net/stories/national/ayodhya-dispute-576875.html" target="_blank">ಅಯೋಧ್ಯೆ ತೀರ್ಪು: ಇಸ್ಲಾಂಗೆ ಮಸೀದಿ ಹಂಗಿಲ್ಲ</a></p>.<p>ಕಾನೂನು ಬಾಹಿರವಾಗಿ ಗುಂಪು ಸೇರುವುದು, ಅಹಿತಕರ ಚಟುವಟಿಕೆಗಳನ್ನು ನಡೆಸುವುದಕ್ಕೆ ನಿರ್ಬಂಧ ಹೇರಿ ಆಗಸ್ಟ್ 31ರಂದೇ ಆದೇಶ ಹೊರಡಿಸಲಾಗಿದೆ. ಆದೇಶಕ್ಕೆ ಇನ್ನಷ್ಟು ಅಂಶಗಳನ್ನು ಸೇರ್ಪಡೆಗೊಳಿಸಿ ಅಕ್ಟೋಬರ್ 12ರಂದು ಮತ್ತೊಂದು ಆದೇಶ ಹೊರಡಿಸಲಾಗಿದೆ.</p>.<p>ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣದಲ್ಲಿ ಮುಸ್ಲಿಂ ಅರ್ಜಿದಾರರು ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಬೇಕಿದೆ. ಮುಂದಿನ ಎರಡು ದಿನಗಳನ್ನು ಹಿಂದೂ ಅರ್ಜಿದಾರರಿಗೆ ಮೀಸಲಿರಿಸಲಾಗಿದೆ. ಅ. 17ರಂದು ವಿಚಾರಣೆ ಅಂತಿಮಗೊಳ್ಳಲಿದ್ದು, ಅಂದು ಎರಡೂ ಕಡೆಯವರು ತಮ್ಮ ಕೊನೆಯ ವಾದವನ್ನು ಪೂರ್ಣಗೊಳಿಸಬೇಕಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/ayodhya-land-case-mediation-655309.html" target="_blank">ಅಯೋಧ್ಯೆ ಪ್ರಕರಣ: ಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ</a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong>ಸುಪ್ರೀಂ ಕೋರ್ಟ್ ನೀಡಲಿರುವ ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣದ ತೀರ್ಪು ಹಾಗೂ ಮುಂಬರಲಿರುವ ಧಾರ್ಮಿಕ ಆಚರಣೆಗಳನ್ನು ಗಮನದಲ್ಲಿರಿಸಿಕೊಂಡು ಅಯೋಧ್ಯೆಯಲ್ಲಿ ಡಿಸೆಂಬರ್ 10ರ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p>ಸಿಆರ್ಪಿಸಿ ಸೆಕ್ಷನ್ 144ರ ಅಡಿಯಲ್ಲಿ ಅಕ್ಟೋಬರ್ 12ರಿಂದಲೇ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನುಜ್ ಕುಮಾರ್ ಝಾ ತಿಳಿಸಿದ್ದಾರೆ.</p>.<p><a href="https://www.prajavani.net/tags/ayodhya-land-dispute" target="_blank">ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣ</a>ದ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, ಸೋಮವಾರದಿಂದ ಕೊನೆಯ ಹಂತದ ವಿಚಾರಣೆ ಆರಂಭವಾಗಲಿದೆ.ಪ್ರಕ್ರಿಯೆ ಪೂರ್ಣಗೊಳಿಸಲು ಅಕ್ಟೋಬರ್ 17ರ ಗಡುವು ನಿಗದಿಪಡಿಸಲಾಗಿದೆ.ನವೆಂಬರ್ 17ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/stories/national/vhp-expedites-stone-carving-659224.html" target="_blank">ಅಯೋಧ್ಯೆ: ಮಂದಿರಕ್ಕಾಗಿ ಕೆತ್ತನೆ ಕೆಲಸ ಚುರುಕು</a></p>.<p>ಜಿಲ್ಲಾಡಳಿತದಿಂದ ಅನುಮತಿ ಪಡೆಯದೆಯೇ ಅಯೋಧ್ಯೆಯಲ್ಲಿ ಡ್ರೋನ್ಗಳು ಮತ್ತು ಮಾನವ ರಹಿತ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಅಯೋಧ್ಯೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೋಣಿಗಳಲ್ಲಿ ಸಂಚರಿಸುವಂತಿಲ್ಲ. ದೀಪಾವಳಿ ಪ್ರಯುಕ್ತ ಪಟಾಕಿಗಳ ಉತ್ಪಾದನೆ ಮತ್ತು ಮಾರಾಟಕ್ಕಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.</p>.<p>ಅಯೋಧ್ಯೆ ಮತ್ತು ಅಯೋಧ್ಯೆಗೆ ಭೇಟಿ ನೀಡುವವರ ಸುರಕ್ಷತೆ ಮತ್ತು ಭದ್ರತಾ ಕಾರಣಗಳಿಂದಾಗಿ ಈ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಸುಪ್ರೀಂ ನೀಡಲಿರುವ ಅಯೋಧ್ಯೆ ತೀರ್ಪಿನ ಜತೆಗೆ ಹಲವು ಹಬ್ಬಗಳ ಆಚರಣೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದೀಪಾವಳಿ, ನರಕ ಚತುರ್ದಶಿ, ಗೋವರ್ಧನ ಪೂಜೆ, ಚಿತ್ರಗುಪ್ತ ಜಯಂತಿ, ಪಾಂಚ್ ಕೋಸಿ ಪರಿಕ್ರಮ, ಕಾರ್ತಿಕ ಪೂರ್ಣಿಮೆ ಮೇಳ, ಗುರು ನಾನಕ್ ಜಯಂತಿ, ಬಾರಾವ್ಫಾತ್,..ಸೇರಿದಂತೆ ಹಲವು ಆಚರಣೆಗಳು ನಡೆಯಲಿವೆ. ಡಿಸೆಂಬರ್ 6ರಂದು ಬಾಬರಿ ಬಸೀದಿ ಧ್ವಂಸಗೊಳಿಸಿದ ದಿನ.</p>.<p><strong>ಇದನ್ನೂ ಓದಿ:</strong> <a href="https://www.prajavani.net/stories/national/ayodhya-dispute-576875.html" target="_blank">ಅಯೋಧ್ಯೆ ತೀರ್ಪು: ಇಸ್ಲಾಂಗೆ ಮಸೀದಿ ಹಂಗಿಲ್ಲ</a></p>.<p>ಕಾನೂನು ಬಾಹಿರವಾಗಿ ಗುಂಪು ಸೇರುವುದು, ಅಹಿತಕರ ಚಟುವಟಿಕೆಗಳನ್ನು ನಡೆಸುವುದಕ್ಕೆ ನಿರ್ಬಂಧ ಹೇರಿ ಆಗಸ್ಟ್ 31ರಂದೇ ಆದೇಶ ಹೊರಡಿಸಲಾಗಿದೆ. ಆದೇಶಕ್ಕೆ ಇನ್ನಷ್ಟು ಅಂಶಗಳನ್ನು ಸೇರ್ಪಡೆಗೊಳಿಸಿ ಅಕ್ಟೋಬರ್ 12ರಂದು ಮತ್ತೊಂದು ಆದೇಶ ಹೊರಡಿಸಲಾಗಿದೆ.</p>.<p>ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣದಲ್ಲಿ ಮುಸ್ಲಿಂ ಅರ್ಜಿದಾರರು ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಬೇಕಿದೆ. ಮುಂದಿನ ಎರಡು ದಿನಗಳನ್ನು ಹಿಂದೂ ಅರ್ಜಿದಾರರಿಗೆ ಮೀಸಲಿರಿಸಲಾಗಿದೆ. ಅ. 17ರಂದು ವಿಚಾರಣೆ ಅಂತಿಮಗೊಳ್ಳಲಿದ್ದು, ಅಂದು ಎರಡೂ ಕಡೆಯವರು ತಮ್ಮ ಕೊನೆಯ ವಾದವನ್ನು ಪೂರ್ಣಗೊಳಿಸಬೇಕಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/ayodhya-land-case-mediation-655309.html" target="_blank">ಅಯೋಧ್ಯೆ ಪ್ರಕರಣ: ಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ</a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>