<p><strong>ನವದೆಹಲಿ:</strong> ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೋವಿಡ್-19 ಆಸ್ಪತ್ರೆಯನ್ನು ಉದ್ಘಾಟಿಸಲು ಶನಿವಾರ ನೋಯ್ಡಾಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭೇಟಿಗೆ ಮುನ್ನ ಶನಿವಾರ ನೋಯ್ಡಾದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಜನರಿಗೆ ಡ್ರೋನ್ಗಳನ್ನು ಹಾರಿಸಲು ಅವಕಾಶವಿಲ್ಲ. 15 ಗೆಜೆಟೆಡ್ ಅಧಿಕಾರಿಗಳು ಮತ್ತು ಕರ್ತವ್ಯದಲ್ಲಿರುವ ಸುಮಾರು 700 ಕಾನ್ಸ್ಟೆಬಲ್ಗಳು ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕಾಗುತ್ತದೆ' ನೋಯ್ಡಾದ ಹೆಚ್ಚುವರಿ ಪೊಲೀಸ್ ಆಯುಕ್ತ (ಎಡಿಸಿಪಿ) ರಣವಿಜಯ್ ಸಿಂಗ್ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರ ಜಿಲ್ಲೆಯ ನೋಯ್ಡಾದ ಸೆಕ್ಟರ್ 39 ರಲ್ಲಿ ಹೊಸ ಕೋವಿಡ್-19 ಸರ್ಕಾರಿ ಆಸ್ಪತ್ರೆಯನ್ನು ಶನಿವಾರದೊಳಗೆ ಉದ್ಘಾಟಿಸಲಾಗುತ್ತಿದೆ.</p>.<p>ಗೌತಮ ಬುದ್ಧ ನಗರದಲ್ಲಿ ಶುಕ್ರವಾರ ಹೊಸದಾಗಿ 61 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,806ಕ್ಕೆ ಏರಿಕೆಯಾಗಿದೆ. ಈ ಪೈಕಿ 906 ಸಕ್ರಿಯ ಪ್ರಕರಣಗಳಿದ್ದರೆ, 4,857 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 43 ಜನರು ಈವರೆಗೆ ಸಾವಿಗೀಡಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು 1,08,614ಕ್ಕೆ ಏರಿಕೆಯಾಗಿದ್ದು, 43,654 ಸಕ್ರಿಯ ಪ್ರಕರಣಗಳಿದ್ದರೆ, 63,402 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 1,918 ಜನರು ಮೃತಪಟ್ಟಿರುವುದಾಗಿ ರಾಜ್ಯದ ಆರೋಗ್ಯ ಇಲಾಖೆಯು ದೃಢಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೋವಿಡ್-19 ಆಸ್ಪತ್ರೆಯನ್ನು ಉದ್ಘಾಟಿಸಲು ಶನಿವಾರ ನೋಯ್ಡಾಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭೇಟಿಗೆ ಮುನ್ನ ಶನಿವಾರ ನೋಯ್ಡಾದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಜನರಿಗೆ ಡ್ರೋನ್ಗಳನ್ನು ಹಾರಿಸಲು ಅವಕಾಶವಿಲ್ಲ. 15 ಗೆಜೆಟೆಡ್ ಅಧಿಕಾರಿಗಳು ಮತ್ತು ಕರ್ತವ್ಯದಲ್ಲಿರುವ ಸುಮಾರು 700 ಕಾನ್ಸ್ಟೆಬಲ್ಗಳು ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕಾಗುತ್ತದೆ' ನೋಯ್ಡಾದ ಹೆಚ್ಚುವರಿ ಪೊಲೀಸ್ ಆಯುಕ್ತ (ಎಡಿಸಿಪಿ) ರಣವಿಜಯ್ ಸಿಂಗ್ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರ ಜಿಲ್ಲೆಯ ನೋಯ್ಡಾದ ಸೆಕ್ಟರ್ 39 ರಲ್ಲಿ ಹೊಸ ಕೋವಿಡ್-19 ಸರ್ಕಾರಿ ಆಸ್ಪತ್ರೆಯನ್ನು ಶನಿವಾರದೊಳಗೆ ಉದ್ಘಾಟಿಸಲಾಗುತ್ತಿದೆ.</p>.<p>ಗೌತಮ ಬುದ್ಧ ನಗರದಲ್ಲಿ ಶುಕ್ರವಾರ ಹೊಸದಾಗಿ 61 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,806ಕ್ಕೆ ಏರಿಕೆಯಾಗಿದೆ. ಈ ಪೈಕಿ 906 ಸಕ್ರಿಯ ಪ್ರಕರಣಗಳಿದ್ದರೆ, 4,857 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 43 ಜನರು ಈವರೆಗೆ ಸಾವಿಗೀಡಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು 1,08,614ಕ್ಕೆ ಏರಿಕೆಯಾಗಿದ್ದು, 43,654 ಸಕ್ರಿಯ ಪ್ರಕರಣಗಳಿದ್ದರೆ, 63,402 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 1,918 ಜನರು ಮೃತಪಟ್ಟಿರುವುದಾಗಿ ರಾಜ್ಯದ ಆರೋಗ್ಯ ಇಲಾಖೆಯು ದೃಢಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>