<p><strong>ಇಂಫಾಲ್</strong>: ಸರ್ಕಾರಿ ಬಸ್ನಿಂದ ರಾಜ್ಯದ ಹೆಸರು ತೆಗೆದುಹಾಕಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಆಯೋಜಿಸಿದ್ದ ರ್ಯಾಲಿಯನ್ನು, ರಾಜ್ಯಪಾಲರು ಮಣಿಪುರಕ್ಕೆ ಆಗಮಿಸಿದ ಕಾರಣ ಭದ್ರತಾ ಸಿಬ್ಬಂದಿ ತಡೆದರು. ಈ ವೇಳೆ ಅಶ್ರುವಾಯು ಪ್ರಯೋಗವು ನಡೆಯಿತು.</p>.<p>ಕ್ವಾಕೆಇತೆಲ್ನಲ್ಲಿ ಜಮಾಯಿಸಿದ್ದ ಪ್ರತಿಭಟನಕಾರರು ರಾಜಭವನದವರೆಗೆ 3 ಕಿ.ಮೀ. ರ್ಯಾಲಿ ನಡೆಸಲು ನಿರ್ಧರಿಸಿದ್ದರು. ಆದರೆ, ಅವರು ಅಲ್ಲಿಂದ ಮುಂದುವರಿಯದಂತೆ ತಡೆಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ವಿದ್ಯಾರ್ಥಿಗಳು ಮತ್ತು ಮಹಿಳೆಯರ ಗುಂಪು ರಾಜಭವನದಿಂದ 200 ಮೀಟರ್ ದೂರದಲ್ಲಿರುವ ಇಂಫಾಲ್ ವಿಮಾನನಿಲ್ದಾಣದಿಂದ ಕೈಸಂಪತ್ವರೆಗೆ 6 ಕಿ.ಮೀ ಉದ್ದದ ಮಾನವ ಸರಪಳಿಯನ್ನು ರಚಿಸಿದ್ದರು ಎಂದು ತಿಳಿಸಿದ್ದಾರೆ. </p>.<p>ಮಣಿಪುರದ ಗುರುತನ್ನು ಅಳಿಸಬಾರದು ಮತ್ತು ರಾಜ್ಯಪಾಲರು ಜನರ ಬಳಿ ಕ್ಷಮೆಯಾಚಿಸಬೇಕೆಂದು ಬರೆದಿರುವ ಭಿತ್ತಿಫಲಕಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.</p>.<p>ಕ್ವಾಕೆಇತೆಲ್ನಲ್ಲಿ ಪ್ರತಿಭಟನಕಾರರು ರಾಜ್ಯಪಾಲರ ಪ್ರತಿಕೃತಿಯನ್ನು ದಹಿಸಲು ಯತ್ನಿಸಿದರು. ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆಯಿತು.</p>.<p>ಮಣಿಪುರ ರಾಜ್ಯಪಾಲ ಅಜಯ್ಕುಮಾರ್ ಭಲ್ಲಾ ಅವರು ಸೋಮವಾರ ದೆಹಲಿಯಿಂದ ಮಣಿಪುರಕ್ಕೆ ಆಗಮಿಸಿದರು. ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಅವರನ್ನು ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಹೆಲಿಕಾಪ್ಟರ್ ಮೂಲಕ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಸರ್ಕಾರಿ ಬಸ್ನಿಂದ ರಾಜ್ಯದ ಹೆಸರು ತೆಗೆದುಹಾಕಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಆಯೋಜಿಸಿದ್ದ ರ್ಯಾಲಿಯನ್ನು, ರಾಜ್ಯಪಾಲರು ಮಣಿಪುರಕ್ಕೆ ಆಗಮಿಸಿದ ಕಾರಣ ಭದ್ರತಾ ಸಿಬ್ಬಂದಿ ತಡೆದರು. ಈ ವೇಳೆ ಅಶ್ರುವಾಯು ಪ್ರಯೋಗವು ನಡೆಯಿತು.</p>.<p>ಕ್ವಾಕೆಇತೆಲ್ನಲ್ಲಿ ಜಮಾಯಿಸಿದ್ದ ಪ್ರತಿಭಟನಕಾರರು ರಾಜಭವನದವರೆಗೆ 3 ಕಿ.ಮೀ. ರ್ಯಾಲಿ ನಡೆಸಲು ನಿರ್ಧರಿಸಿದ್ದರು. ಆದರೆ, ಅವರು ಅಲ್ಲಿಂದ ಮುಂದುವರಿಯದಂತೆ ತಡೆಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ವಿದ್ಯಾರ್ಥಿಗಳು ಮತ್ತು ಮಹಿಳೆಯರ ಗುಂಪು ರಾಜಭವನದಿಂದ 200 ಮೀಟರ್ ದೂರದಲ್ಲಿರುವ ಇಂಫಾಲ್ ವಿಮಾನನಿಲ್ದಾಣದಿಂದ ಕೈಸಂಪತ್ವರೆಗೆ 6 ಕಿ.ಮೀ ಉದ್ದದ ಮಾನವ ಸರಪಳಿಯನ್ನು ರಚಿಸಿದ್ದರು ಎಂದು ತಿಳಿಸಿದ್ದಾರೆ. </p>.<p>ಮಣಿಪುರದ ಗುರುತನ್ನು ಅಳಿಸಬಾರದು ಮತ್ತು ರಾಜ್ಯಪಾಲರು ಜನರ ಬಳಿ ಕ್ಷಮೆಯಾಚಿಸಬೇಕೆಂದು ಬರೆದಿರುವ ಭಿತ್ತಿಫಲಕಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.</p>.<p>ಕ್ವಾಕೆಇತೆಲ್ನಲ್ಲಿ ಪ್ರತಿಭಟನಕಾರರು ರಾಜ್ಯಪಾಲರ ಪ್ರತಿಕೃತಿಯನ್ನು ದಹಿಸಲು ಯತ್ನಿಸಿದರು. ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆಯಿತು.</p>.<p>ಮಣಿಪುರ ರಾಜ್ಯಪಾಲ ಅಜಯ್ಕುಮಾರ್ ಭಲ್ಲಾ ಅವರು ಸೋಮವಾರ ದೆಹಲಿಯಿಂದ ಮಣಿಪುರಕ್ಕೆ ಆಗಮಿಸಿದರು. ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಅವರನ್ನು ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಹೆಲಿಕಾಪ್ಟರ್ ಮೂಲಕ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>