<p><strong>ಸಂಭಲ್ (ಉತ್ತರ ಪ್ರದೇಶ):</strong> ಬಾಬರಿ ಮಸೀದಿ ಉರುಳಿಸಿದ ವಾರ್ಷಿಕೋತ್ಸವ (ಡಿ. 6) ಹಾಗೂ ಶುಕ್ರವಾರದ ಜುಮಾ ಪ್ರಾರ್ಥನೆಯ ಅಂಗವಾಗಿ, ಮುನ್ನೆಚ್ಚರಿಕೆಯ ಕ್ರಮವಾಗಿ ಸಂಭಲ್ನಲ್ಲಿ ಭಾರಿ ಬಿಗಿಬಂದೋಬಸ್ತ್ ಆಯೋಜಿಸಲಾಗಿತ್ತು.</p>.<p>ಸ್ಥಳೀಯ ಮಸೀದಿಗಳಲ್ಲಿಯೇ ಪ್ರಾರ್ಥನೆ ಸಲ್ಲಿಸುವಂತೆ ಹಾಗೂ ತಮ್ಮ ತಮ್ಮ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡುವಂತೆ ಧರ್ಮಗುರುಗಳು ಜನರಿಗೆ ಮನವಿ ಮಾಡಿದರು.</p>.<p>‘ಶಾಹಿ ಜಾಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಶಾಂತಿಯುತವಾಗಿ ನಡೆಯಿತು. 600 ಜನರು ಭಾಗಿಯಾಗಿದ್ದರು’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಪತ್ರಕರ್ತರಿಗೆ ತಿಳಿಸಿದರು.</p>.<p>ಸಂಭಲ್ನ ಕೋಟ್ ಗರ್ವಿ ಪ್ರದೇಶದಲ್ಲಿರುವ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ನ. 24ರಂದು ಸಮೀಕ್ಷೆ ನಡೆಸಲು ಮುಂದಾದಾಗ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಅಂದಿನಿಂದಲೂ ಈ ಪ್ರದೇಶ ಉದ್ವಿಗ್ನವಾಗಿದೆ.</p>.<p>ಡಿಐಜಿ ಜಿ.ಮುನಿರಾಜು ನೇತೃತ್ವದಲ್ಲಿ ಗುರುವಾರ ಸಂಜೆ ಪೊಲೀಸರು ಪಥ ಸಂಚಲನ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್ (ಉತ್ತರ ಪ್ರದೇಶ):</strong> ಬಾಬರಿ ಮಸೀದಿ ಉರುಳಿಸಿದ ವಾರ್ಷಿಕೋತ್ಸವ (ಡಿ. 6) ಹಾಗೂ ಶುಕ್ರವಾರದ ಜುಮಾ ಪ್ರಾರ್ಥನೆಯ ಅಂಗವಾಗಿ, ಮುನ್ನೆಚ್ಚರಿಕೆಯ ಕ್ರಮವಾಗಿ ಸಂಭಲ್ನಲ್ಲಿ ಭಾರಿ ಬಿಗಿಬಂದೋಬಸ್ತ್ ಆಯೋಜಿಸಲಾಗಿತ್ತು.</p>.<p>ಸ್ಥಳೀಯ ಮಸೀದಿಗಳಲ್ಲಿಯೇ ಪ್ರಾರ್ಥನೆ ಸಲ್ಲಿಸುವಂತೆ ಹಾಗೂ ತಮ್ಮ ತಮ್ಮ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡುವಂತೆ ಧರ್ಮಗುರುಗಳು ಜನರಿಗೆ ಮನವಿ ಮಾಡಿದರು.</p>.<p>‘ಶಾಹಿ ಜಾಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಶಾಂತಿಯುತವಾಗಿ ನಡೆಯಿತು. 600 ಜನರು ಭಾಗಿಯಾಗಿದ್ದರು’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಪತ್ರಕರ್ತರಿಗೆ ತಿಳಿಸಿದರು.</p>.<p>ಸಂಭಲ್ನ ಕೋಟ್ ಗರ್ವಿ ಪ್ರದೇಶದಲ್ಲಿರುವ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ನ. 24ರಂದು ಸಮೀಕ್ಷೆ ನಡೆಸಲು ಮುಂದಾದಾಗ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಅಂದಿನಿಂದಲೂ ಈ ಪ್ರದೇಶ ಉದ್ವಿಗ್ನವಾಗಿದೆ.</p>.<p>ಡಿಐಜಿ ಜಿ.ಮುನಿರಾಜು ನೇತೃತ್ವದಲ್ಲಿ ಗುರುವಾರ ಸಂಜೆ ಪೊಲೀಸರು ಪಥ ಸಂಚಲನ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>