ಚುನಾವಣಾ ಆಯೋಗದ ನೀತಿಯ ಪ್ರಕಾರ, ತವರು ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಅಥವಾ ಮೂರು ವರ್ಷಗಳನ್ನು ಒಂದೇ ಕಡೆ ಪೂರೈಸಿರುವ ಅಧಿಕಾರಿಗಳನ್ನು ಲೋಕಸಭಾ ಅಥವಾ ವಿಧಾನಸಭಾ ಚುನಾವಣೆಗೂ ಮುನ್ನ ವರ್ಗಾವಣೆ ಮಾಡಬೇಕು. ಕೆಲ ರಾಜ್ಯಗಳು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಕಾರಣ ಈ ನೀತಿಯನ್ನು ಬಲಪಡಿಸಲಾಗಿದೆ ಎಂದು ಆಯೋಗ ಹೇಳಿದೆ.