<p><strong>ಮಹಾಕುಂಭ್ ನಗರ, ಉತ್ತರಪ್ರದೇಶ</strong>: ‘ಗೋ ಹತ್ಯೆ ನಿಷೇಧಿಸುವ ಕುರಿತು ಕೇಂದ್ರ ಸರ್ಕಾರಕ್ಕೆ 33 ದಿನಗಳ ಗಡುವು ನೀಡಿರುವ ಉತ್ತರಾಖಂಡ ಶಂಕರಾಚಾರ್ಯ ಜೋತಿರ್ಮಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ಮಾರ್ಚ್ 17ರ ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>ಸೆಕ್ಟರ್–19ರಲ್ಲಿರುವ ಶಂಕರಾಚಾರ್ಯ ಶಿಬಿರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಗೋವಿನ ದೇಹದಲ್ಲಿ 33 ಕೋಟಿ ದೇವರು ನೆಲಸಿದ್ದಾರೆ. ಹೀಗಾಗಿ, ಕಳೆದ ಒಂದೂವರೆ ವರ್ಷದಿಂದ ಗೋಹತ್ಯೆ ನಿಷೇಧಿಸಿ, ರಾಷ್ಟ್ರಮಾತ ಎಂದು ಘೋಷಿಸಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಮಾಘಿ ಪೂರ್ಣಿಮೆಯ ಮರುದಿನದಿಂದ 33 ದಿನಗಳ ಕಾಲ ದೀರ್ಘಯಾತ್ರೆ ಆರಂಭಿಸಲಿದ್ದು, ಮಾ.17ರಂದು ಈ ಯಾತ್ರೆಯು ದೆಹಲಿಯಲ್ಲಿ ಕೊನೆಗೊಳ್ಳಲಿದೆ. ಕೇಂದ್ರ ಸರ್ಕಾರವು 33 ದಿನದಲ್ಲಿ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಮಾ.17ರ ಸಂಜೆ 5 ಗಂಟೆಗೆ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p class="title">‘ಗೋವನ್ನು ಪ್ರಾಣಿಗಳ ವರ್ಗದಿಂದ ಕೈಬಿಡಬೇಕು. ಗೋಹತ್ಯೆ ನಿಷೇಧಿಸಿ, ರಾಷ್ಟ್ರಮಾತಾ ಎಂದು ಘೋಷಿಸಬೇಕು. ಗೋವಿನ ಕುರಿತಾಗಿ ರಾಜ್ಯಗಳು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಬೇಕು’ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಕುಂಭ್ ನಗರ, ಉತ್ತರಪ್ರದೇಶ</strong>: ‘ಗೋ ಹತ್ಯೆ ನಿಷೇಧಿಸುವ ಕುರಿತು ಕೇಂದ್ರ ಸರ್ಕಾರಕ್ಕೆ 33 ದಿನಗಳ ಗಡುವು ನೀಡಿರುವ ಉತ್ತರಾಖಂಡ ಶಂಕರಾಚಾರ್ಯ ಜೋತಿರ್ಮಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ಮಾರ್ಚ್ 17ರ ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>ಸೆಕ್ಟರ್–19ರಲ್ಲಿರುವ ಶಂಕರಾಚಾರ್ಯ ಶಿಬಿರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಗೋವಿನ ದೇಹದಲ್ಲಿ 33 ಕೋಟಿ ದೇವರು ನೆಲಸಿದ್ದಾರೆ. ಹೀಗಾಗಿ, ಕಳೆದ ಒಂದೂವರೆ ವರ್ಷದಿಂದ ಗೋಹತ್ಯೆ ನಿಷೇಧಿಸಿ, ರಾಷ್ಟ್ರಮಾತ ಎಂದು ಘೋಷಿಸಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಮಾಘಿ ಪೂರ್ಣಿಮೆಯ ಮರುದಿನದಿಂದ 33 ದಿನಗಳ ಕಾಲ ದೀರ್ಘಯಾತ್ರೆ ಆರಂಭಿಸಲಿದ್ದು, ಮಾ.17ರಂದು ಈ ಯಾತ್ರೆಯು ದೆಹಲಿಯಲ್ಲಿ ಕೊನೆಗೊಳ್ಳಲಿದೆ. ಕೇಂದ್ರ ಸರ್ಕಾರವು 33 ದಿನದಲ್ಲಿ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಮಾ.17ರ ಸಂಜೆ 5 ಗಂಟೆಗೆ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p class="title">‘ಗೋವನ್ನು ಪ್ರಾಣಿಗಳ ವರ್ಗದಿಂದ ಕೈಬಿಡಬೇಕು. ಗೋಹತ್ಯೆ ನಿಷೇಧಿಸಿ, ರಾಷ್ಟ್ರಮಾತಾ ಎಂದು ಘೋಷಿಸಬೇಕು. ಗೋವಿನ ಕುರಿತಾಗಿ ರಾಜ್ಯಗಳು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಬೇಕು’ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>