<p><strong>ಹರಿದ್ವಾರ:</strong> ಉತ್ತರಾಖಂಡದ ಕೇದಾರನಾಥ, ಬದರೀನಾಥ ಸೇರಿದಂತೆ ಹಿಮಾಲಯದಲ್ಲಿರುವ ನಾಲ್ಕು ಪ್ರಸಿದ್ಧ ದೇಗುಲಗಳ ಹೆಸರುಗಳ ದುರ್ಬಳಕೆ ತಡೆಗೆ ಕಾನೂನು ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹರಿದ್ವಾರದ ಸಂತರು ಸ್ವಾಗತಿಸಿದ್ದಾರೆ.</p>.<p>‘ಸನಾತನ ಧರ್ಮದ ನಾಲ್ಕು ಧಾಮಗಳು, 12 ಜ್ಯೋತಿರ್ಲಿಂಗಗಳು ಮತ್ತು 52 ಶಕ್ತಿಪೀಠಗಳಿಗೆ ಪರ್ಯಾಯ ಎಂಬುದೇ ಇಲ್ಲ. ಅವುಗಳ ಹೆಸರಿನಲ್ಲಿ ಬೇರೆ ದೇಗುಲ ಅಥವಾ ಟ್ರಸ್ಟ್ ಇರಕೂಡದು’ ಎಂದು ಬಾಬಾ ಹಠಯೋಗಿ ಹೇಳಿದರು. </p>.<p>ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಈ ಕುರಿತ ಮನವಿಪತ್ರವನ್ನು ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಧಾರ್ಮಿಕ ಸ್ಥಳಗಳು ಮತ್ತು ಸಂಸ್ಥೆಗಳು ಭಾರತದ ಸಾಂಸ್ಕೃತಿಕ ಆಸ್ತಿ. ಅವುಗಳಿಗೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಉತ್ತರಾಖಂಡ ಸರ್ಕಾರದ ನಿರ್ಧಾರವು ನಮ್ಮ ಸಾಂಸ್ಕೃತಿಕ ಅಸ್ಮಿತೆ ಮತ್ತು ಹಕ್ಕುಗಳನ್ನು ರಕ್ಷಿಸುತ್ತದೆ’ ಎಂದು ಹೇಳಿದರು.</p>.<p>ಸಂತ ವಿಷ್ಣು ದಾಸ್ ಮಹಾರಾಜ್ ಅವರು, ‘ಭವಿಷ್ಯದಲ್ಲಿ ನಾಲ್ಕು ಧಾಮಗಳ ಹೆಸರಿನಲ್ಲಿ ಟ್ರಸ್ಟ್, ಸಮಿತಿಗಳು ಮತ್ತಿತರ ಸಂಸ್ಥೆಗಳು ತಲೆ ಎತ್ತಬಹುದು. ಇದರಿಂದ ಜನರಲ್ಲಿ ಗೊಂದಲ ಉಂಟಾಗುತ್ತದೆ’ ಎಂದು ಹೇಳಿದರು.</p>.<p>‘ಚಾರ್ಧಾಮ್ನಂತಹ ಯಾತ್ರಾ ಸ್ಥಳಗಳ ಪಾವಿತ್ರ್ಯ ಕಾಪಾಡಲು ಸರ್ಕಾರದ ನಿರ್ಧಾರವು ಕಾನೂನಾತ್ಮಕ ರಕ್ಷಣೆ ನೀಡುತ್ತದೆ’ ಎಂದು ಶ್ಲಾಘಿಸಿದರು.</p>.<p>ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇಗುಲ ನಿರ್ಮಿಸುವ ಪ್ರಸ್ತಾವವು ವಿವಾದಾತ್ಮಕ ಸ್ವರೂಪ ಪಡೆದ ಬೆನ್ನಲ್ಲೇ, ಉತ್ತರಾಖಂಡ ಸರ್ಕಾರವು ಗುರುವಾರ ಈ ದೇಗುಲಗಳ ಹೆಸರು ದುರ್ಬಳಕೆ ತಡೆಗೆ ಕಾನೂನು ಜಾರಿ ಮಾಡುವ ನಿರ್ಧಾರ ತೆಗೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿದ್ವಾರ:</strong> ಉತ್ತರಾಖಂಡದ ಕೇದಾರನಾಥ, ಬದರೀನಾಥ ಸೇರಿದಂತೆ ಹಿಮಾಲಯದಲ್ಲಿರುವ ನಾಲ್ಕು ಪ್ರಸಿದ್ಧ ದೇಗುಲಗಳ ಹೆಸರುಗಳ ದುರ್ಬಳಕೆ ತಡೆಗೆ ಕಾನೂನು ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹರಿದ್ವಾರದ ಸಂತರು ಸ್ವಾಗತಿಸಿದ್ದಾರೆ.</p>.<p>‘ಸನಾತನ ಧರ್ಮದ ನಾಲ್ಕು ಧಾಮಗಳು, 12 ಜ್ಯೋತಿರ್ಲಿಂಗಗಳು ಮತ್ತು 52 ಶಕ್ತಿಪೀಠಗಳಿಗೆ ಪರ್ಯಾಯ ಎಂಬುದೇ ಇಲ್ಲ. ಅವುಗಳ ಹೆಸರಿನಲ್ಲಿ ಬೇರೆ ದೇಗುಲ ಅಥವಾ ಟ್ರಸ್ಟ್ ಇರಕೂಡದು’ ಎಂದು ಬಾಬಾ ಹಠಯೋಗಿ ಹೇಳಿದರು. </p>.<p>ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಈ ಕುರಿತ ಮನವಿಪತ್ರವನ್ನು ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಧಾರ್ಮಿಕ ಸ್ಥಳಗಳು ಮತ್ತು ಸಂಸ್ಥೆಗಳು ಭಾರತದ ಸಾಂಸ್ಕೃತಿಕ ಆಸ್ತಿ. ಅವುಗಳಿಗೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಉತ್ತರಾಖಂಡ ಸರ್ಕಾರದ ನಿರ್ಧಾರವು ನಮ್ಮ ಸಾಂಸ್ಕೃತಿಕ ಅಸ್ಮಿತೆ ಮತ್ತು ಹಕ್ಕುಗಳನ್ನು ರಕ್ಷಿಸುತ್ತದೆ’ ಎಂದು ಹೇಳಿದರು.</p>.<p>ಸಂತ ವಿಷ್ಣು ದಾಸ್ ಮಹಾರಾಜ್ ಅವರು, ‘ಭವಿಷ್ಯದಲ್ಲಿ ನಾಲ್ಕು ಧಾಮಗಳ ಹೆಸರಿನಲ್ಲಿ ಟ್ರಸ್ಟ್, ಸಮಿತಿಗಳು ಮತ್ತಿತರ ಸಂಸ್ಥೆಗಳು ತಲೆ ಎತ್ತಬಹುದು. ಇದರಿಂದ ಜನರಲ್ಲಿ ಗೊಂದಲ ಉಂಟಾಗುತ್ತದೆ’ ಎಂದು ಹೇಳಿದರು.</p>.<p>‘ಚಾರ್ಧಾಮ್ನಂತಹ ಯಾತ್ರಾ ಸ್ಥಳಗಳ ಪಾವಿತ್ರ್ಯ ಕಾಪಾಡಲು ಸರ್ಕಾರದ ನಿರ್ಧಾರವು ಕಾನೂನಾತ್ಮಕ ರಕ್ಷಣೆ ನೀಡುತ್ತದೆ’ ಎಂದು ಶ್ಲಾಘಿಸಿದರು.</p>.<p>ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇಗುಲ ನಿರ್ಮಿಸುವ ಪ್ರಸ್ತಾವವು ವಿವಾದಾತ್ಮಕ ಸ್ವರೂಪ ಪಡೆದ ಬೆನ್ನಲ್ಲೇ, ಉತ್ತರಾಖಂಡ ಸರ್ಕಾರವು ಗುರುವಾರ ಈ ದೇಗುಲಗಳ ಹೆಸರು ದುರ್ಬಳಕೆ ತಡೆಗೆ ಕಾನೂನು ಜಾರಿ ಮಾಡುವ ನಿರ್ಧಾರ ತೆಗೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>