‘ಸಮಯದ ಬಗ್ಗೆ ನಮಗೆ ತೃಪ್ತಿಯಾಗದೇ ಹೋದರೆ, ಎರಡು ತಿಂಗಳೊಳಗೆ ನಿರ್ಧಾರ ಕೈಗೊಳ್ಳುವಂತೆ ಸೂಚಿಸಬೇಕಾಗುತ್ತದೆ. ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾದ ನಿರ್ಧಾರಗಳನ್ನು ಕೈಗೊಂಡಾಗ ನ್ಯಾಯಾಲಯವು ಮಧ್ಯಪ್ರವೇಶಿಸಲೇಬೇಕಾಗುತ್ತದೆ. ಈ ಅರ್ಜಿಯ ವಿಚಾರಣೆಯನ್ನು ಸೋಮವಾರ ಅಥವಾ ಮಂಗಳವಾರ ಮತ್ತೆ ನಡೆಸುತ್ತೇವೆ’ ಎಂದು ನ್ಯಾ. ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ತಿಳಿಸಿತು.