‘ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ರೀತಿಯಲ್ಲೇ ಫಡಣವೀಸ್ ಅವರು ಈಗ ವಿರೋಧ ಪಕ್ಷದ ನಾಯಕರಾಗಿ ಕ್ರಿಯಾಶೀಲರಾಗಿದ್ದಾರೆ. ಒಂದು ವೇಳೆ ಕೊರೊನಾ ಸೋಂಕು ದೃಢಪಟ್ಟರೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ತಮ್ಮ ಆಪ್ತ ಬಳಗಕ್ಕೆ ಫಡಣವೀಸ್ ತಿಳಿಸಿದ್ದಾರೆ. ಫಡಣವೀಸ್ ಅವರ ಈ ನಿಲುವು ಪ್ರಶಂಸನೀಯ’ ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದೆ.