<p><strong>ಪಾಲ್ಘರ್</strong>: ಶಿವಸೇನಾ(ಯುಬಿಟಿ) ಬಣದ ನಾಯಕನ ಮಗ ಆಟೊ ಚಾಲಕನ ಜೊತೆ ವಾಗ್ವಾದ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿ ನಡೆದಿದೆ. ಈ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.</p><p>ಥಾಣೆಯ ಅವಿಭಜಿತ ಶಿವಸೇನಾದ ಮಾಜಿ ಜಿಲ್ಲಾಧ್ಯಕ್ಷರಾದ ರಘುನಾಥ್ ಮೋರೆ ಅವರ ಮಗ ಮಿಲಿಂದ್ ಮೋರೆ ಮೃತ ವ್ಯಕ್ತಿ. ಈ ಘಟನೆ ನಡೆದಾಗ ರಘುನಾಥ್ ಅವರು ತಮ್ಮ ಕುಟುಂಬದ ಜೊತೆ ನವಪುರ್ ರೆಸಾರ್ಟ್ನಲ್ಲಿದ್ದರು ಎಂದು ಡಿಸಿಪಿ ಜಯಂತ ಬಜಬಾಳೆ ತಿಳಿಸಿದ್ದಾರೆ.</p><p>‘ರೆಸಾರ್ಟ್ನಿಂದ ಹೊರಬಂದ ಮಗ ಆಟೊ ಡ್ರೈವರ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ಸಂದರ್ಭ ಕುಸಿದುಬಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಗ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ಎಂದು ವೈದ್ಯರು ಖಚಿತಪಡಿಸಿದ್ದಾರೆ.</p><p>ಮೋರೆ ಸಂಬಂಧಿಕರ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅನ್ವಯ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p><p>ಮಿಲಿಂದ್ ಮೋರೆ ಸದ್ಯ ಥಾಣೆಯ ಶಿವಸೇನಾ(ಯುಬಿಟಿ) ಬಣದ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಘರ್</strong>: ಶಿವಸೇನಾ(ಯುಬಿಟಿ) ಬಣದ ನಾಯಕನ ಮಗ ಆಟೊ ಚಾಲಕನ ಜೊತೆ ವಾಗ್ವಾದ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿ ನಡೆದಿದೆ. ಈ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.</p><p>ಥಾಣೆಯ ಅವಿಭಜಿತ ಶಿವಸೇನಾದ ಮಾಜಿ ಜಿಲ್ಲಾಧ್ಯಕ್ಷರಾದ ರಘುನಾಥ್ ಮೋರೆ ಅವರ ಮಗ ಮಿಲಿಂದ್ ಮೋರೆ ಮೃತ ವ್ಯಕ್ತಿ. ಈ ಘಟನೆ ನಡೆದಾಗ ರಘುನಾಥ್ ಅವರು ತಮ್ಮ ಕುಟುಂಬದ ಜೊತೆ ನವಪುರ್ ರೆಸಾರ್ಟ್ನಲ್ಲಿದ್ದರು ಎಂದು ಡಿಸಿಪಿ ಜಯಂತ ಬಜಬಾಳೆ ತಿಳಿಸಿದ್ದಾರೆ.</p><p>‘ರೆಸಾರ್ಟ್ನಿಂದ ಹೊರಬಂದ ಮಗ ಆಟೊ ಡ್ರೈವರ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ಸಂದರ್ಭ ಕುಸಿದುಬಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಗ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ಎಂದು ವೈದ್ಯರು ಖಚಿತಪಡಿಸಿದ್ದಾರೆ.</p><p>ಮೋರೆ ಸಂಬಂಧಿಕರ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅನ್ವಯ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p><p>ಮಿಲಿಂದ್ ಮೋರೆ ಸದ್ಯ ಥಾಣೆಯ ಶಿವಸೇನಾ(ಯುಬಿಟಿ) ಬಣದ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>