<p><strong>ಮುಂಬೈ</strong>: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನ್ನ ನೆಲೆಯನ್ನು ಬಲಪಡಿಸಿಕೊಳ್ಳಲು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ‘ಇಂಡಿಯಾ’ ಬಣ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ವಿಸರ್ಜನೆಗೆ ಪಕ್ಷ ಎಂದಿಗೂ ಕರೆ ನೀಡಿಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಗಾಗಿ ಎಂವಿಎ ಮತ್ತು ಲೋಕಸಭೆ ಚುನಾವಣೆಗಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಲಾಗಿದೆ. ಸ್ಥಳೀಯ ಆಡಳಿತದ ಚುನಾವಣೆಗಳು ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಮತ್ತು ತಳಮಟ್ಟದಲ್ಲಿ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ’ ಎಂದು ತಿಳಿಸಿದ್ದಾರೆ.</p><p>‘ಮೈತ್ರಿಯಲ್ಲಿ ಆಯಾ ಪಕ್ಷಗಳ ಕಾರ್ಯಕರ್ತರಿಗೆ ಅವಕಾಶಗಳ ಕೊರತೆಯಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ‘ಇಂಡಿಯಾ’ ಬಣ ಮತ್ತು ಎಂವಿಎ ಅನ್ನು ವಿಸರ್ಜಿಸಬೇಕೇಂದು ಎಂದಿಗೂ ಹೇಳಿಲ್ಲ’ ಎಂದು ರಾವುತ್ ಹೇಳಿದ್ದಾರೆ.</p><p>ಏಕಾಂಗಿ ಸ್ಪರ್ಧೆ ಕುರಿತು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವುತ್, ‘ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಕ್ರಿಯಿಸುವ ಮೊದಲು ಸಂಪೂರ್ಣ ವಿಷಯವನ್ನು ತಿಳಿದುಕೊಳ್ಳಬೇಕು. ಕಾಂಗ್ರೆಸ್ ನಾಯಕರಿಗೆ ಬೇರೆಯವರ ಮಾತು ಕೇಳುವ ಅಭ್ಯಾಸವಿರಬೇಕು’ ಎಂದು ತಿಳಿಸಿದ್ದಾರೆ.</p>.ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿ ಸ್ಪರ್ಧೆ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನ್ನ ನೆಲೆಯನ್ನು ಬಲಪಡಿಸಿಕೊಳ್ಳಲು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ‘ಇಂಡಿಯಾ’ ಬಣ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ವಿಸರ್ಜನೆಗೆ ಪಕ್ಷ ಎಂದಿಗೂ ಕರೆ ನೀಡಿಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಗಾಗಿ ಎಂವಿಎ ಮತ್ತು ಲೋಕಸಭೆ ಚುನಾವಣೆಗಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಲಾಗಿದೆ. ಸ್ಥಳೀಯ ಆಡಳಿತದ ಚುನಾವಣೆಗಳು ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಮತ್ತು ತಳಮಟ್ಟದಲ್ಲಿ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ’ ಎಂದು ತಿಳಿಸಿದ್ದಾರೆ.</p><p>‘ಮೈತ್ರಿಯಲ್ಲಿ ಆಯಾ ಪಕ್ಷಗಳ ಕಾರ್ಯಕರ್ತರಿಗೆ ಅವಕಾಶಗಳ ಕೊರತೆಯಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ‘ಇಂಡಿಯಾ’ ಬಣ ಮತ್ತು ಎಂವಿಎ ಅನ್ನು ವಿಸರ್ಜಿಸಬೇಕೇಂದು ಎಂದಿಗೂ ಹೇಳಿಲ್ಲ’ ಎಂದು ರಾವುತ್ ಹೇಳಿದ್ದಾರೆ.</p><p>ಏಕಾಂಗಿ ಸ್ಪರ್ಧೆ ಕುರಿತು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವುತ್, ‘ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಕ್ರಿಯಿಸುವ ಮೊದಲು ಸಂಪೂರ್ಣ ವಿಷಯವನ್ನು ತಿಳಿದುಕೊಳ್ಳಬೇಕು. ಕಾಂಗ್ರೆಸ್ ನಾಯಕರಿಗೆ ಬೇರೆಯವರ ಮಾತು ಕೇಳುವ ಅಭ್ಯಾಸವಿರಬೇಕು’ ಎಂದು ತಿಳಿಸಿದ್ದಾರೆ.</p>.ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿ ಸ್ಪರ್ಧೆ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>