<p><strong>ಹಮೀರ್ಪುರ</strong>: ದೇಶದ ಏಕಮಾತ್ರ ಮಹಿಳಾ ಮುಖ್ಯಮಂತ್ರಿ ಆಡಳಿತ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಪ್ರಶ್ನೆ ಉದ್ಭವಿಸುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.</p>.ಸಂದೇಶ್ಖಾಲಿ ಉದ್ವಿಗ್ನ: ಟಿಎಂಸಿ ನಾಯಕನನ್ನು ಅಟ್ಟಾಡಿಸಿಕೊಂಡು ಹೊಡೆದ ಉದ್ರಿಕ್ತರು.<p>ಭೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಠಾಕೂರ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು, ಸಂದೇಶ್ಖಾಲಿಯಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸೆಯಲಾಗಿದೆ. ಪರಿಸ್ಥಿತಿ ನಿಭಾಯಿಸಲು ಅಲ್ಲಿನ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.</p><p>ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ಟಿಎಂಸಿ ಮುಖಂಡ ಶಾಜಹಾನ್ ಶೇಖ್ ಮತ್ತು ಅವರ ಬೆಂಬಲಿಗರು ಭೂ ಕಬಳಿಕೆ ಹಾಗೂ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಎಂದು ಆರೋಪಿಸಿದ ನಂತರದಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ.</p><p>ಪ್ರಮುಖ ಆರೋಪಿ ಶಾಜಹಾನ್ ಶೇಖ್ನನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸ್ಥಳೀಯರು ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಮಹಿಳಾ ನಾಯಕಿರನ್ನು ಹಿಂಸಾಚಾರ ಪೀಡಿತ ಸಂದೇಶ್ಖಾಲಿಗೆ ಹೋಗದಂತೆ ಅಲ್ಲಿನ ಪೊಲೀಸರು ತಡೆದಿರುವುದರೊಂದಿಗೆ ರಾಜಕೀಯ ಹಣಾಹಣಿ ತೀವ್ರಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಮೀರ್ಪುರ</strong>: ದೇಶದ ಏಕಮಾತ್ರ ಮಹಿಳಾ ಮುಖ್ಯಮಂತ್ರಿ ಆಡಳಿತ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಪ್ರಶ್ನೆ ಉದ್ಭವಿಸುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.</p>.ಸಂದೇಶ್ಖಾಲಿ ಉದ್ವಿಗ್ನ: ಟಿಎಂಸಿ ನಾಯಕನನ್ನು ಅಟ್ಟಾಡಿಸಿಕೊಂಡು ಹೊಡೆದ ಉದ್ರಿಕ್ತರು.<p>ಭೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಠಾಕೂರ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು, ಸಂದೇಶ್ಖಾಲಿಯಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸೆಯಲಾಗಿದೆ. ಪರಿಸ್ಥಿತಿ ನಿಭಾಯಿಸಲು ಅಲ್ಲಿನ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.</p><p>ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ಟಿಎಂಸಿ ಮುಖಂಡ ಶಾಜಹಾನ್ ಶೇಖ್ ಮತ್ತು ಅವರ ಬೆಂಬಲಿಗರು ಭೂ ಕಬಳಿಕೆ ಹಾಗೂ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಎಂದು ಆರೋಪಿಸಿದ ನಂತರದಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ.</p><p>ಪ್ರಮುಖ ಆರೋಪಿ ಶಾಜಹಾನ್ ಶೇಖ್ನನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸ್ಥಳೀಯರು ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಮಹಿಳಾ ನಾಯಕಿರನ್ನು ಹಿಂಸಾಚಾರ ಪೀಡಿತ ಸಂದೇಶ್ಖಾಲಿಗೆ ಹೋಗದಂತೆ ಅಲ್ಲಿನ ಪೊಲೀಸರು ತಡೆದಿರುವುದರೊಂದಿಗೆ ರಾಜಕೀಯ ಹಣಾಹಣಿ ತೀವ್ರಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>