ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ | ಕಾರು ಅಪಘಾತ; ಬಿಜೆಡಿ ಮುಖಂಡನಿಗೆ ಗಾಯ

Published 15 ಮಾರ್ಚ್ 2024, 4:54 IST
Last Updated 15 ಮಾರ್ಚ್ 2024, 4:54 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಬಿಜೆಡಿ ಉಪಾಧ್ಯಕ್ಷ, ಮಾಜಿ ಸಂಸದ ಪ್ರಸನ್ನ ಆಚಾರ್ಯ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸನ್ನ ಅವರು ಸಂಚರಿಸುತ್ತಿದ್ದ ಕಾರು, ಆಮ್ಲಜನಕ ತುಂಬಿದ್ದ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಭುವನೇಶ್ವರದಿಂದ ಸಂಬಲ್‌ಪುರಕ್ಕೆ ಸಂಚರಿಸುತ್ತಿದ್ದಾಗ ರೈರಾಖೋಲ್ ಬಲದಿಹ್ ಬಳಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ.

ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ.

ಆಚಾರ್ಯ ಮತ್ತು ಅವರ ಭದ್ರತಾ ಅಧಿಕಾರಿಯನ್ನು (ಪಿಎಸ್‌ಒ) ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಚಾರ್ಯ ಹಾಗೂ ಪಿಎಸ್‌ಒ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಏರ್ ಲಿಫ್ಟ್ ಮಾಡಲಾಗುವುದು ಎಂದು ಸಂಬಲ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಭಾಮು ತಿಳಿಸಿದ್ದಾರೆ.

ಆಚಾರ್ಯ ಅವರ ತಲೆ, ಮೂಗು, ಗಲ್ಲ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT