ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರದ ರಾಜ್ಯಪಾಲರಾಗಿ ಬಿಜೆಪಿ ನಾಯಕ ಗಣೇಶನ್ ನೇಮಕ

Last Updated 22 ಆಗಸ್ಟ್ 2021, 8:15 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಎಲ್‌.ಗಣೇಶನ್‌ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ಭಾನುವಾರ ನೇಮಕ ಮಾಡಿದ್ದಾರೆ.

ʼಶ್ರೀ ಎಲ್‌. ಗಣೇಶನ್‌ ಅವರನ್ನು ಮಣಿಪುರ ರಾಜ್ಯಪಾಲರನ್ನಾಗಿ ನೇಮಿಸಲು ರಾಷ್ಟ್ರಪತಿಯವರು ಹರ್ಷಗೊಂಡಿದ್ದಾರೆʼ ಎಂದು ಕೋವಿಂದ್‌ ಅವರ ಮಾಧ್ಯಮ ಕಾರ್ಯದರ್ಶಿ ಅಜಯ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ಗಣೇಶನ್‌ ಅವರು ಮಣಿಪುರದ 17ನೇ ರಾಜ್ಯಪಾಲ ಎನಿಸಿದ್ದು, ಅವರು ನಜಾ ಹೆಫ್ತುಲ್ಲಾ ಅವರಿಂದ ತೆರವಾಗಿರುವ ಸ್ಥಾನ ತುಂಬಲಿದ್ದಾರೆ. ನಜ್ಮಾ ಹೆಪ್ತುಲ್ಲಾ ಅವರು ಈ ತಿಂಗಳ ಆರಂಭದಲ್ಲಿ ನಿವೃತ್ತರಾಗಿದ್ದರು. ಸಿಕ್ಕಿಂ ರಾಜ್ಯಪಾಲ ಗಂಗಾ ಪ್ರಸಾದ್ ಅವರಿಗೆ ಮಣಿಪುರದ ಹೆಚ್ಚುವರಿ ಹೊಣೆ ವಹಿಸಲಾಗಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT