<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.</p>.<p>ಜೈಲಿನಿಂದ ಹೊರಬಂದ ಎರಡು ದಿನಗಳ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್ ಮಾಗುಂಟಾ ಅವರಿಗೆ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ’ ಎಂದು ಆರೋಪಿಸಿದ್ದಾರೆ.</p><p>ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದೆ. </p><p>ಅಬಕಾರಿ ನೀತಿ ಹಗರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಗಾಗಿದ್ದ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ (ಏಪ್ರಿಲ್ 2) ಜಾಮೀನು ಮಂಜೂರು ಮಾಡಿತ್ತು.</p><p>‘ರಾಘವ್ ಮಾಗುಂಟಾ ಅವರ ತಂದೆ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟಾ ಶ್ರೀನಿವಾಸುಲು ರೆಡ್ಡಿ ಅವರ ವಿರುದ್ಧ 2022ರ ಸೆಪ್ಟೆಂಬರ್ 16ರಂದು ಕ್ರಮ ಕೈಗೊಳ್ಳಲಾಗಿತ್ತು. ಈ ವೇಳೆ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಅವರನ್ನು ಒತ್ತಾಯಿಸಲಾಯಿತು. ಅವರು ನಿರಾಕರಿಸಿದಾಗ, ಅವರ ಮಗ ರಾಘವ್ ರೆಡ್ಡಿ ಅವರನ್ನು ಬಂಧಿಸಲಾಯಿತು. ನಿರಂತರ ವಿಚಾರಣೆಯ ಬಳಿಕ ರೆಡ್ಡಿ ಅವರು ಕೇಜ್ರಿವಾಲ್ ವಿರುದ್ಧ ಹೇಳಿಕೆಯನ್ನು ಬದಲಾಯಿಸಿದರು’ ಎಂದು ಸಿಂಗ್ ತಿಳಿಸಿದ್ದಾರೆ.</p>.ಬಿಜೆಪಿಗೆ ತಕ್ಕ ಉತ್ತರ ಕೊಡುವ ಕಾಲ: ಸಂಜಯ್ ಸಿಂಗ್.<p>‘ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕಲು ದೊಡ್ಡ ಪಿತೂರಿಯನ್ನು ನಡೆಸಲಾಗಿದೆ. ಅಬಕಾರಿ ನೀತಿ ಹಗರಣದ ಹಿಂದೆ ಬಿಜೆಪಿ ಕೈವಾಡ ಇದ್ದು, ಪಕ್ಷದ ಹಿರಿಯ ನಾಯಕರು ಶಾಮೀಲಾಗಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.</p><p>ಕೇಜ್ರಿವಾಲ್ ಅವರು ಪ್ರಾಮಾಣಿಕ ಜೀವನವನ್ನು ನಡೆಸಿದ್ದಾರೆ. ದೆಹಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ನೀಡುವ ಗುರಿಯನ್ನು ಹೊಂದಿದ್ದರು ಎಂದು ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.</p>.<p>ಜೈಲಿನಿಂದ ಹೊರಬಂದ ಎರಡು ದಿನಗಳ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್ ಮಾಗುಂಟಾ ಅವರಿಗೆ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ’ ಎಂದು ಆರೋಪಿಸಿದ್ದಾರೆ.</p><p>ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದೆ. </p><p>ಅಬಕಾರಿ ನೀತಿ ಹಗರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಗಾಗಿದ್ದ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ (ಏಪ್ರಿಲ್ 2) ಜಾಮೀನು ಮಂಜೂರು ಮಾಡಿತ್ತು.</p><p>‘ರಾಘವ್ ಮಾಗುಂಟಾ ಅವರ ತಂದೆ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟಾ ಶ್ರೀನಿವಾಸುಲು ರೆಡ್ಡಿ ಅವರ ವಿರುದ್ಧ 2022ರ ಸೆಪ್ಟೆಂಬರ್ 16ರಂದು ಕ್ರಮ ಕೈಗೊಳ್ಳಲಾಗಿತ್ತು. ಈ ವೇಳೆ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಅವರನ್ನು ಒತ್ತಾಯಿಸಲಾಯಿತು. ಅವರು ನಿರಾಕರಿಸಿದಾಗ, ಅವರ ಮಗ ರಾಘವ್ ರೆಡ್ಡಿ ಅವರನ್ನು ಬಂಧಿಸಲಾಯಿತು. ನಿರಂತರ ವಿಚಾರಣೆಯ ಬಳಿಕ ರೆಡ್ಡಿ ಅವರು ಕೇಜ್ರಿವಾಲ್ ವಿರುದ್ಧ ಹೇಳಿಕೆಯನ್ನು ಬದಲಾಯಿಸಿದರು’ ಎಂದು ಸಿಂಗ್ ತಿಳಿಸಿದ್ದಾರೆ.</p>.ಬಿಜೆಪಿಗೆ ತಕ್ಕ ಉತ್ತರ ಕೊಡುವ ಕಾಲ: ಸಂಜಯ್ ಸಿಂಗ್.<p>‘ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕಲು ದೊಡ್ಡ ಪಿತೂರಿಯನ್ನು ನಡೆಸಲಾಗಿದೆ. ಅಬಕಾರಿ ನೀತಿ ಹಗರಣದ ಹಿಂದೆ ಬಿಜೆಪಿ ಕೈವಾಡ ಇದ್ದು, ಪಕ್ಷದ ಹಿರಿಯ ನಾಯಕರು ಶಾಮೀಲಾಗಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.</p><p>ಕೇಜ್ರಿವಾಲ್ ಅವರು ಪ್ರಾಮಾಣಿಕ ಜೀವನವನ್ನು ನಡೆಸಿದ್ದಾರೆ. ದೆಹಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ನೀಡುವ ಗುರಿಯನ್ನು ಹೊಂದಿದ್ದರು ಎಂದು ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>