2012ರಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಯಡಿ ಆಯ್ಕೆಯಾದ ಯಾತ್ರಿಕರಿಗೆ ವಿಶೇಷ ರೈಲುಗಳ ಮೂಲಕ ಉಚಿತವಾಗಿ ತೀರ್ಥ ಸ್ಥಳಗಳನ್ನು ನೋಡುವ ಅವಕಾಶ ಕಲ್ಪಿಸಲಾಗಿತ್ತು. ಇತ್ತೀಚೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಯೋಜನೆಯಡಿ ವಿಮಾನದ ಮೂಲಕ ತೀರ್ಥಯಾತ್ರೆಗೆ ಹೋಗುವ ಅವಕಾಶ ಕಲ್ಪಿಸಲಾಗವುದು ಎಂದು ಘೋಷಿಸಿದ್ದರು.