<p><strong>ರಾಂಚಿ:</strong> ಜಾರ್ಖಂಡ್ನ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಹಿರಿಯ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಚೌಬೆಯನ್ನು ಮಂಗಳವಾರ ಬಂಧಿಸಿದೆ. </p>.<p>ಒಂದು ತಾಸಿಗೂ ಅಧಿಕ ಕಾಲ ವಿಚಾರಣೆಗೆ ಒಳಪಡಿಸಿದ ಬಳಿಕ ಅವರನ್ನು ಬಂಧಿಸಲಾಯಿತು. ನಂತರ, ಎಸಿಬಿಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಕುಮಾರ್ ಮುಂದೆ ಹಾಜರುಪಡಿಸಲಾಯಿತು.</p>.<p>1999ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಚೌಬೆ ಅವರು, ಹಲವು ಮಹತ್ವದ ಹುದ್ದೆಗಳ ಜವಾಬ್ದಾರಿ ನಿರ್ವಹಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತ, ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.</p>.<p class="title">ವಿನಯ್ ಕುಮಾರ್ ಚೌಬೆ ಈ ಹಿಂದೆ ಜಾರ್ಖಂಡ್ನ ಅಬಕಾರಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ವೇಳೆ ಅಬಕಾರಿ ನೀತಿಯಲ್ಲಿ ಅಕ್ರಮ ನಡೆಸಿದ್ದು ಬೆಳಕಿಗೆ ಬಂದ ಬಳಿಕ ಎಸಿಬಿ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಚೌಬೆ ವಿರುದ್ಧ ಎಫ್ಐಆರ್ ದಾಖಲಿಸಲು ರಾಜ್ಯ ಸರ್ಕಾರ ಎಸಿಬಿಗೆ ಅನುಮತಿ ನೀಡಿತ್ತು.</p>.<p class="title">ಇದರ ಬೆನ್ನಲ್ಲೇ, ಮಂಗಳವಾರ ಬೆಳಿಗ್ಗೆ ಚೌಬೆ ಅವರ ನಿವಾಸಕ್ಕೆ ಬಂದ ಎಸಿಬಿ ತಂಡ, ವಿಚಾರಣೆಗಾಗಿ ಕೇಂದ್ರ ಕಚೇರಿಗೆ ಕರೆದೊಯ್ದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಂಟಿ ಆಯುಕ್ತ ಗಜೇಂದ್ರ ಸಿಂಗ್ ಅವರನ್ನು ಎಸಿಬಿ ವಿಚಾರಣೆಗೊಳಪಡಿಸಿತ್ತು.</p>.<p class="title">ಹಗರಣಕ್ಕೆ ಸಂಬಂಧಿಸಿದಂತೆ, ಚೌಬೆ ಹಾಗೂ ಸಿಂಗ್ ಅವರಿಗೆ ಸೇರಿದ ಮನೆಗಳ ಮೇಲೆ ಕಳೆದ ವರ್ಷದ ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ನ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಹಿರಿಯ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಚೌಬೆಯನ್ನು ಮಂಗಳವಾರ ಬಂಧಿಸಿದೆ. </p>.<p>ಒಂದು ತಾಸಿಗೂ ಅಧಿಕ ಕಾಲ ವಿಚಾರಣೆಗೆ ಒಳಪಡಿಸಿದ ಬಳಿಕ ಅವರನ್ನು ಬಂಧಿಸಲಾಯಿತು. ನಂತರ, ಎಸಿಬಿಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಕುಮಾರ್ ಮುಂದೆ ಹಾಜರುಪಡಿಸಲಾಯಿತು.</p>.<p>1999ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಚೌಬೆ ಅವರು, ಹಲವು ಮಹತ್ವದ ಹುದ್ದೆಗಳ ಜವಾಬ್ದಾರಿ ನಿರ್ವಹಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತ, ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.</p>.<p class="title">ವಿನಯ್ ಕುಮಾರ್ ಚೌಬೆ ಈ ಹಿಂದೆ ಜಾರ್ಖಂಡ್ನ ಅಬಕಾರಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ವೇಳೆ ಅಬಕಾರಿ ನೀತಿಯಲ್ಲಿ ಅಕ್ರಮ ನಡೆಸಿದ್ದು ಬೆಳಕಿಗೆ ಬಂದ ಬಳಿಕ ಎಸಿಬಿ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಚೌಬೆ ವಿರುದ್ಧ ಎಫ್ಐಆರ್ ದಾಖಲಿಸಲು ರಾಜ್ಯ ಸರ್ಕಾರ ಎಸಿಬಿಗೆ ಅನುಮತಿ ನೀಡಿತ್ತು.</p>.<p class="title">ಇದರ ಬೆನ್ನಲ್ಲೇ, ಮಂಗಳವಾರ ಬೆಳಿಗ್ಗೆ ಚೌಬೆ ಅವರ ನಿವಾಸಕ್ಕೆ ಬಂದ ಎಸಿಬಿ ತಂಡ, ವಿಚಾರಣೆಗಾಗಿ ಕೇಂದ್ರ ಕಚೇರಿಗೆ ಕರೆದೊಯ್ದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಂಟಿ ಆಯುಕ್ತ ಗಜೇಂದ್ರ ಸಿಂಗ್ ಅವರನ್ನು ಎಸಿಬಿ ವಿಚಾರಣೆಗೊಳಪಡಿಸಿತ್ತು.</p>.<p class="title">ಹಗರಣಕ್ಕೆ ಸಂಬಂಧಿಸಿದಂತೆ, ಚೌಬೆ ಹಾಗೂ ಸಿಂಗ್ ಅವರಿಗೆ ಸೇರಿದ ಮನೆಗಳ ಮೇಲೆ ಕಳೆದ ವರ್ಷದ ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>