<p><strong>ನವದೆಹಲಿ</strong>: ಹಿರಿಯ ಐಪಿಎಸ್ ಅಧಿಕಾರಿ ಆರ್.ಎ. ಚಂದ್ರಶೇಖರ್ ಅವರನ್ನು ಸಂಪುಟ ಸಚಿವಾಲಯದ ಕಾರ್ಯದರ್ಶಿ (ಭದ್ರತೆ) ಆಗಿ ನೇಮಕ ಮಾಡಲಾಗಿದೆ. ಸದ್ಯ ಅವರು ಗುಪ್ತಚರ ವಿಭಾಗದ ವಿಶೇಷ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ಈ ಬಗ್ಗೆ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ಕಾರ್ಯದರ್ಶಿ (ಭದ್ರತೆ) ಹುದ್ದೆಯಲ್ಲಿ ಹರಿನಾಥ್ ಮಿಶ್ರಾ ಕಾರ್ಯನಿರ್ವಹಿಸುತ್ತಿದ್ದು, ಇವರ ಅಧಿಕಾರಾವಧಿಯು ಮುಂದಿನ ತಿಂಗಳು ಕೊನೆಗೊಳ್ಳಲಿದೆ.</p>.<p>ಚಂದ್ರಶೇಖರ್ ಅವರು ಕೇರಳ ಕೇಡರ್ನ 1991ನೇ ಬ್ಯಾಚ್ನವರು. ಆಗಸ್ಟ್ 1ರಿಂದ ಚಂದ್ರಶೇಖರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾರ್ಯದರ್ಶಿಯು (ಭದ್ರತೆ) ಪ್ರಧಾನಿ ಮತ್ತು ಅವರ ಅಧಿಕೃತ ನಿವಾಸದಲ್ಲಿ ವಾಸ ಮಾಡುವ ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವ ವಿಶೇಷ ಭದ್ರತಾ ಪಡೆಯ ಮುಖ್ಯಸ್ಥರಾಗಿರುತ್ತಾರೆ.</p>.<p>ಮತ್ತೊಂದು ಆದೇಶದಲ್ಲಿ, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ವಿಶೇಷ ಮಹಾನಿರ್ದೇಶಕ ಸುನಿಲ್ ಕುಮಾರ್ ಝಾ ಅವರನ್ನು ಅಗ್ನಿಶಾಮಕ ದಳ, ಸಾರ್ವಜನಿಕ ರಕ್ಷಣೆ ಮತ್ತು ಗೃಹ ದಳದ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.</p>.<p>ಸುನಿಲ್ ಝಾ ಅವರು ಬಿಹಾರ ಕೇಡರ್ನ 1993ನೇ ಬ್ಯಾಚ್ನವರು. ಈ ಹುದ್ದೆಯಲ್ಲಿ ಸದ್ಯ ವಿವೇಕ್ ಶ್ರೀವಾಸ್ತವ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಜೂನ್ 30ಕ್ಕೆ ನಿವೃತ್ತರಾಗಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಿರಿಯ ಐಪಿಎಸ್ ಅಧಿಕಾರಿ ಆರ್.ಎ. ಚಂದ್ರಶೇಖರ್ ಅವರನ್ನು ಸಂಪುಟ ಸಚಿವಾಲಯದ ಕಾರ್ಯದರ್ಶಿ (ಭದ್ರತೆ) ಆಗಿ ನೇಮಕ ಮಾಡಲಾಗಿದೆ. ಸದ್ಯ ಅವರು ಗುಪ್ತಚರ ವಿಭಾಗದ ವಿಶೇಷ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ಈ ಬಗ್ಗೆ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ಕಾರ್ಯದರ್ಶಿ (ಭದ್ರತೆ) ಹುದ್ದೆಯಲ್ಲಿ ಹರಿನಾಥ್ ಮಿಶ್ರಾ ಕಾರ್ಯನಿರ್ವಹಿಸುತ್ತಿದ್ದು, ಇವರ ಅಧಿಕಾರಾವಧಿಯು ಮುಂದಿನ ತಿಂಗಳು ಕೊನೆಗೊಳ್ಳಲಿದೆ.</p>.<p>ಚಂದ್ರಶೇಖರ್ ಅವರು ಕೇರಳ ಕೇಡರ್ನ 1991ನೇ ಬ್ಯಾಚ್ನವರು. ಆಗಸ್ಟ್ 1ರಿಂದ ಚಂದ್ರಶೇಖರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾರ್ಯದರ್ಶಿಯು (ಭದ್ರತೆ) ಪ್ರಧಾನಿ ಮತ್ತು ಅವರ ಅಧಿಕೃತ ನಿವಾಸದಲ್ಲಿ ವಾಸ ಮಾಡುವ ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವ ವಿಶೇಷ ಭದ್ರತಾ ಪಡೆಯ ಮುಖ್ಯಸ್ಥರಾಗಿರುತ್ತಾರೆ.</p>.<p>ಮತ್ತೊಂದು ಆದೇಶದಲ್ಲಿ, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ವಿಶೇಷ ಮಹಾನಿರ್ದೇಶಕ ಸುನಿಲ್ ಕುಮಾರ್ ಝಾ ಅವರನ್ನು ಅಗ್ನಿಶಾಮಕ ದಳ, ಸಾರ್ವಜನಿಕ ರಕ್ಷಣೆ ಮತ್ತು ಗೃಹ ದಳದ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.</p>.<p>ಸುನಿಲ್ ಝಾ ಅವರು ಬಿಹಾರ ಕೇಡರ್ನ 1993ನೇ ಬ್ಯಾಚ್ನವರು. ಈ ಹುದ್ದೆಯಲ್ಲಿ ಸದ್ಯ ವಿವೇಕ್ ಶ್ರೀವಾಸ್ತವ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಜೂನ್ 30ಕ್ಕೆ ನಿವೃತ್ತರಾಗಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>