<p><strong>ಪೆಶಾವರ</strong>: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನದ ಹಿರಿಯ ಪತ್ರಕರ್ತರೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. </p>.<p>ಮಂಗಳವಾರ ತಮ್ಮ ಸ್ನೇಹಿತನ ಜೊತೆಗೆ ಪತ್ರಕರ್ತ ಖಲೀಲ್ ಜಿಬ್ರಾನ್ ಅವರು ಕಾರಿನಲ್ಲಿ ತಮ್ಮ ಮನೆಗೆ ಹೊರಟಿದ್ದರು. ಈ ವೇಳೆ ಖೈಬರ್ ಜಿಲ್ಲೆಯ ಲಂಡಿ ಕೋಟಲ್ ಎಂಬಲ್ಲಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಕಾರನ್ನು ಅಡ್ಡಗಟ್ಟಿದರು. ಬಳಿಕ ಜಿಬ್ರಾನ್ ಅವರನ್ನು ಕಾರಿನಿಂದ ಹೊರಗೆಳೆದು, ಈ ಕೃತ್ಯವೆಸಗಿದ್ದಾರೆ. ಜಿಬ್ರಾನ್ ಅವರ ಜೊತೆಗಿದ್ದ ಸ್ನೇಹಿತ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಜಿಬ್ರಾನ್ ಅವರಿಗೆ ಭಯೋತ್ಪಾದಕರಿಂದ ಆಗ್ಗಾಗ್ಗೆ ಬೆದರಿಕೆಯ ಕರೆಗಳು ಬರುತ್ತಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p>ಜಿಬ್ರಾನ್ ಅವರ ಹತ್ಯೆ ಖಂಡಿಸಿ, ಪತ್ರಕರ್ತರು ಖೈಬರ್–ಪಾಕ್–ಅಫ್ಗಾನ್ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಕೃತ್ಯವೆಸಗಿದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ</strong>: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನದ ಹಿರಿಯ ಪತ್ರಕರ್ತರೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. </p>.<p>ಮಂಗಳವಾರ ತಮ್ಮ ಸ್ನೇಹಿತನ ಜೊತೆಗೆ ಪತ್ರಕರ್ತ ಖಲೀಲ್ ಜಿಬ್ರಾನ್ ಅವರು ಕಾರಿನಲ್ಲಿ ತಮ್ಮ ಮನೆಗೆ ಹೊರಟಿದ್ದರು. ಈ ವೇಳೆ ಖೈಬರ್ ಜಿಲ್ಲೆಯ ಲಂಡಿ ಕೋಟಲ್ ಎಂಬಲ್ಲಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಕಾರನ್ನು ಅಡ್ಡಗಟ್ಟಿದರು. ಬಳಿಕ ಜಿಬ್ರಾನ್ ಅವರನ್ನು ಕಾರಿನಿಂದ ಹೊರಗೆಳೆದು, ಈ ಕೃತ್ಯವೆಸಗಿದ್ದಾರೆ. ಜಿಬ್ರಾನ್ ಅವರ ಜೊತೆಗಿದ್ದ ಸ್ನೇಹಿತ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಜಿಬ್ರಾನ್ ಅವರಿಗೆ ಭಯೋತ್ಪಾದಕರಿಂದ ಆಗ್ಗಾಗ್ಗೆ ಬೆದರಿಕೆಯ ಕರೆಗಳು ಬರುತ್ತಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p>ಜಿಬ್ರಾನ್ ಅವರ ಹತ್ಯೆ ಖಂಡಿಸಿ, ಪತ್ರಕರ್ತರು ಖೈಬರ್–ಪಾಕ್–ಅಫ್ಗಾನ್ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಕೃತ್ಯವೆಸಗಿದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>