<p><strong>ಲಖನೌ</strong>: ಬೌದ್ಧವಿಹಾರ ನೆಲಸಮಗೊಳಿಸಿದ ಬಳಿಕ ಅನೇಕ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ. ಹಾಗಾಗಿ ಪ್ರತಿ ಮಸೀದಿಯಲ್ಲೂ ದೇವಾಲಯ ಹುಡುಕಬೇಡಿ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಗೆ ಸಲಹೆ ನೀಡಿದ್ದಾರೆ. </p>.<p>‘ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಾಲಯಗಳನ್ನು ಹುಡುಕಿದರೆ, ಬೌದ್ಧರು ಪ್ರತಿ ದೇವಾಲಯದಲ್ಲಿ ವಿಹಾರವನ್ನು ಹುಡುಕುತ್ತಾರೆ. ಬೌದ್ಧವಿಹಾರಗಳನ್ನು ನೆಲಸಮಗೊಳಿಸಿದ ನಂತರ ಈ ಹಿಂದೆ ಅನೇಕ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ’ ಎಂದು ಮೌರ್ಯ ಹೇಳಿದ್ದಾರೆ.</p>.<p>ಆದ್ದರಿಂದ, ನಾವು 1947ರಲ್ಲಿದ್ದ ದೇವಾಲಯಗಳು ಮತ್ತು ಮಸೀದಿಗಳ ಸ್ಥಾನಮಾನ ಉಳಿಸಿಕೊಳ್ಳುವುದು ಉತ್ತಮ ಎಂದಿದ್ದಾರೆ. </p>.<p>ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿದ ನಂತರ ಬದರೀನಾಥ್, ಕೇದಾರನಾಥ ಮತ್ತು ಜಗನ್ನಾಥಪುರಿ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂದು ಕೆಲವು ಪುಸ್ತಕಗಳಲ್ಲಿ ಉಲ್ಲೇಖಗಳಿವೆ ಎಂದು ಅವರು ಹೇಳಿದ್ದಾರೆ.</p>.<p>ಶಾಂತಿ ನೆಲೆಸಲು ಎಲ್ಲರೂ ಸಂವಿಧಾನಕ್ಕೆ ಬದ್ಧರಾಗಿರಬೇಕು ಮತ್ತು ಕೋಮು ದ್ವೇಷ ಪ್ರಚೋದಿಸುವ ಯಾವುದೇ ಪ್ರಯತ್ನವನ್ನು ಖಂಡಿಸಬೇಕು ಎಂದರು. </p>.<p>ಮೌರ್ಯ ಅವರ ಹೇಳಿಕೆ ದುರದೃಷ್ಟಕರ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದಾರೆ.</p>.<p>ಮೌರ್ಯ ಈ ಹಿಂದೆ ಹಿಂದೂ ಮಹಾಕಾವ್ಯ ರಾಮ್ ಚರಿತ ಮಾನಸ್ ಅನ್ನು ‘ದಲಿತ ವಿರೋಧಿ’ ಎಂದು ಹೇಳಿ ನಿಷೇಧಿಸುವಂತೆ ಒತ್ತಾಯಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬೌದ್ಧವಿಹಾರ ನೆಲಸಮಗೊಳಿಸಿದ ಬಳಿಕ ಅನೇಕ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ. ಹಾಗಾಗಿ ಪ್ರತಿ ಮಸೀದಿಯಲ್ಲೂ ದೇವಾಲಯ ಹುಡುಕಬೇಡಿ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಗೆ ಸಲಹೆ ನೀಡಿದ್ದಾರೆ. </p>.<p>‘ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಾಲಯಗಳನ್ನು ಹುಡುಕಿದರೆ, ಬೌದ್ಧರು ಪ್ರತಿ ದೇವಾಲಯದಲ್ಲಿ ವಿಹಾರವನ್ನು ಹುಡುಕುತ್ತಾರೆ. ಬೌದ್ಧವಿಹಾರಗಳನ್ನು ನೆಲಸಮಗೊಳಿಸಿದ ನಂತರ ಈ ಹಿಂದೆ ಅನೇಕ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ’ ಎಂದು ಮೌರ್ಯ ಹೇಳಿದ್ದಾರೆ.</p>.<p>ಆದ್ದರಿಂದ, ನಾವು 1947ರಲ್ಲಿದ್ದ ದೇವಾಲಯಗಳು ಮತ್ತು ಮಸೀದಿಗಳ ಸ್ಥಾನಮಾನ ಉಳಿಸಿಕೊಳ್ಳುವುದು ಉತ್ತಮ ಎಂದಿದ್ದಾರೆ. </p>.<p>ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿದ ನಂತರ ಬದರೀನಾಥ್, ಕೇದಾರನಾಥ ಮತ್ತು ಜಗನ್ನಾಥಪುರಿ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂದು ಕೆಲವು ಪುಸ್ತಕಗಳಲ್ಲಿ ಉಲ್ಲೇಖಗಳಿವೆ ಎಂದು ಅವರು ಹೇಳಿದ್ದಾರೆ.</p>.<p>ಶಾಂತಿ ನೆಲೆಸಲು ಎಲ್ಲರೂ ಸಂವಿಧಾನಕ್ಕೆ ಬದ್ಧರಾಗಿರಬೇಕು ಮತ್ತು ಕೋಮು ದ್ವೇಷ ಪ್ರಚೋದಿಸುವ ಯಾವುದೇ ಪ್ರಯತ್ನವನ್ನು ಖಂಡಿಸಬೇಕು ಎಂದರು. </p>.<p>ಮೌರ್ಯ ಅವರ ಹೇಳಿಕೆ ದುರದೃಷ್ಟಕರ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದಾರೆ.</p>.<p>ಮೌರ್ಯ ಈ ಹಿಂದೆ ಹಿಂದೂ ಮಹಾಕಾವ್ಯ ರಾಮ್ ಚರಿತ ಮಾನಸ್ ಅನ್ನು ‘ದಲಿತ ವಿರೋಧಿ’ ಎಂದು ಹೇಳಿ ನಿಷೇಧಿಸುವಂತೆ ಒತ್ತಾಯಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>