<p><strong>ಚೆನ್ನೈ</strong> : ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸ್ಥಳೀಯ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಪಡೆಯಲು ಸೆಂಥಿಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.</p>.<p>ಎರಡು ಬ್ಯಾಂಕ್ ಚಲನ್ಗಳೂ ಸೇರಿದಂತೆ ಇನ್ನಿತರೆ ಕೆಲವು ದಾಖಲೆಗಳನ್ನು ಸೆಂಥಿಲ್ ಅವರಿಗೆ ನೀಡಿದ ನ್ಯಾಯಾಧೀಶ ಎಸ್.ಅಲ್ಲಿ, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದರು. ಅಂತೆಯೇ, ಸೆಂಥಿಲ್ ಅವರ ನ್ಯಾಯಾಂಗ ಬಂಧನವನ್ನು ಇದೇ 25ರವರೆಗೆ ವಿಸ್ತರಿಸಿ ಆದೇಶಿಸಿದರು. </p>.<p>‘ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಬೇಕು. ಎರಡು ಚಲನ್ಗಳನ್ನು ನನಗೆ ನೀಡಬೇಕು ಮತ್ತು ಈ ಹಿಂದೆ ನ್ಯಾಯಾಲಯ ಬ್ಯಾಂಕ್ಗೆ ನೀಡಿದ್ದ ಸಮನ್ಸ್ಗಳನ್ನು ಹಾಜರುಪಡಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸೆಂಥಿಲ್ ಮಾರ್ಚ್ 28ರಂದು ಅರ್ಜಿ ಸಲ್ಲಿಸಿದ್ದರು. </p>.<p>ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ‘ಬ್ಯಾಂಕ್ ಚಲನ್ಗಳನ್ನು ನೀಡಬೇಕಿರುವುದರಿಂದ ಸೆಂಥಿಲ್ ಅವರನ್ನು ಇದೇ 22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು’ ಎಂದು ಜೈಲಿನ ಅಧಿಕಾರಿಗಳಿಗೆ ಇದೇ 17ರಂದು ನಿರ್ದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong> : ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸ್ಥಳೀಯ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಪಡೆಯಲು ಸೆಂಥಿಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.</p>.<p>ಎರಡು ಬ್ಯಾಂಕ್ ಚಲನ್ಗಳೂ ಸೇರಿದಂತೆ ಇನ್ನಿತರೆ ಕೆಲವು ದಾಖಲೆಗಳನ್ನು ಸೆಂಥಿಲ್ ಅವರಿಗೆ ನೀಡಿದ ನ್ಯಾಯಾಧೀಶ ಎಸ್.ಅಲ್ಲಿ, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದರು. ಅಂತೆಯೇ, ಸೆಂಥಿಲ್ ಅವರ ನ್ಯಾಯಾಂಗ ಬಂಧನವನ್ನು ಇದೇ 25ರವರೆಗೆ ವಿಸ್ತರಿಸಿ ಆದೇಶಿಸಿದರು. </p>.<p>‘ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಬೇಕು. ಎರಡು ಚಲನ್ಗಳನ್ನು ನನಗೆ ನೀಡಬೇಕು ಮತ್ತು ಈ ಹಿಂದೆ ನ್ಯಾಯಾಲಯ ಬ್ಯಾಂಕ್ಗೆ ನೀಡಿದ್ದ ಸಮನ್ಸ್ಗಳನ್ನು ಹಾಜರುಪಡಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸೆಂಥಿಲ್ ಮಾರ್ಚ್ 28ರಂದು ಅರ್ಜಿ ಸಲ್ಲಿಸಿದ್ದರು. </p>.<p>ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ‘ಬ್ಯಾಂಕ್ ಚಲನ್ಗಳನ್ನು ನೀಡಬೇಕಿರುವುದರಿಂದ ಸೆಂಥಿಲ್ ಅವರನ್ನು ಇದೇ 22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು’ ಎಂದು ಜೈಲಿನ ಅಧಿಕಾರಿಗಳಿಗೆ ಇದೇ 17ರಂದು ನಿರ್ದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>