<p><strong>ನವದೆಹಲಿ: </strong>ರಾಜಕಾರಣಿಗಳಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪ್ರತ್ಯೇಕ ನ್ಯಾಯಮಂಡಳಿ ಸ್ಥಾಪಿಸುವ ಅಗತ್ಯವಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು.</p>.<p>ಬುಧವಾರ ದಕ್ಷಿಣ ಭಾರತದ ಪತ್ರಕರ್ತರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.</p>.<p>ರಾಜಕೀಯ ಲಾಭಕ್ಕಾಗಿ ಹಾಗೂ ಸಚಿವರಾಗುವ ಉದ್ದೇಶದೊಂದಿಗೆ ಪಕ್ಷ ಬದಲಿಸುವವರ ಸಂಖ್ಯೆ ಹೆಚ್ಚುತ್ತಿದೆ. 10 ವರ್ಷ ಗತಿಸಿದರೂ ಪಕ್ಷಾಂತರಕ್ಕೆ ಸಂಬಂಧಿಸಿದ ಪ್ರಕರಣಗಳು ಇತ್ಯರ್ಥವಾಗದಿರುವ ಉದಾಹರಣೆಗಳು ಇವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪಕ್ಷಾಂತರ ಹಾಗೂ ರಾಜಕೀಯ ಮುಖಂಡರ ವಿರುದ್ಧದ ಅಪರಾಧ ಪ್ರಕರಣಗಳನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸುವ ಪದ್ಧತಿ ಜಾರಿಯಾಗಬೇಕು ಎಂದು ಅವರು ತಿಳಿಸಿದರು.</p>.<p>ಪಕ್ಷಾಂತರ ತಡೆಗಾಗಿ ಪ್ರತ್ಯೇಕ ಕಾಯ್ದೆಯೇ ಇದೆ. ರಾಜೀನಾಮೆ ನೀಡದೆಯೇ ಬೇರೆ ಪಕ್ಷ ಸೇರಿ ಸಚಿವರಾಗಲು ಬಯಸುವವವರಿಗೆ ಮತದಾರರೇ ಸೂಕ್ತ ಉತ್ತರ ನೀಡಬೇಕು. ಕರ್ನಾಟಕದಲ್ಲಿ ಇತ್ತೀಚೆಗೆ ಪಕ್ಷಾಂತರ ಮಾಡಿದವರು ಪುನರಾಯ್ಕೆಯಾಗಿದ್ದಾರೆ ಎಂದು ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜಕಾರಣಿಗಳಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪ್ರತ್ಯೇಕ ನ್ಯಾಯಮಂಡಳಿ ಸ್ಥಾಪಿಸುವ ಅಗತ್ಯವಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು.</p>.<p>ಬುಧವಾರ ದಕ್ಷಿಣ ಭಾರತದ ಪತ್ರಕರ್ತರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.</p>.<p>ರಾಜಕೀಯ ಲಾಭಕ್ಕಾಗಿ ಹಾಗೂ ಸಚಿವರಾಗುವ ಉದ್ದೇಶದೊಂದಿಗೆ ಪಕ್ಷ ಬದಲಿಸುವವರ ಸಂಖ್ಯೆ ಹೆಚ್ಚುತ್ತಿದೆ. 10 ವರ್ಷ ಗತಿಸಿದರೂ ಪಕ್ಷಾಂತರಕ್ಕೆ ಸಂಬಂಧಿಸಿದ ಪ್ರಕರಣಗಳು ಇತ್ಯರ್ಥವಾಗದಿರುವ ಉದಾಹರಣೆಗಳು ಇವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪಕ್ಷಾಂತರ ಹಾಗೂ ರಾಜಕೀಯ ಮುಖಂಡರ ವಿರುದ್ಧದ ಅಪರಾಧ ಪ್ರಕರಣಗಳನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸುವ ಪದ್ಧತಿ ಜಾರಿಯಾಗಬೇಕು ಎಂದು ಅವರು ತಿಳಿಸಿದರು.</p>.<p>ಪಕ್ಷಾಂತರ ತಡೆಗಾಗಿ ಪ್ರತ್ಯೇಕ ಕಾಯ್ದೆಯೇ ಇದೆ. ರಾಜೀನಾಮೆ ನೀಡದೆಯೇ ಬೇರೆ ಪಕ್ಷ ಸೇರಿ ಸಚಿವರಾಗಲು ಬಯಸುವವವರಿಗೆ ಮತದಾರರೇ ಸೂಕ್ತ ಉತ್ತರ ನೀಡಬೇಕು. ಕರ್ನಾಟಕದಲ್ಲಿ ಇತ್ತೀಚೆಗೆ ಪಕ್ಷಾಂತರ ಮಾಡಿದವರು ಪುನರಾಯ್ಕೆಯಾಗಿದ್ದಾರೆ ಎಂದು ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>