<p><strong>ನವದೆಹಲಿ</strong>: ಬಿಜೆಪಿಯವರಿಂದ ತಮಗೆ ಬೆದರಿಕೆ ಮತ್ತು ಒತ್ತಡವಿದ್ದು, ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 'ಗಂಭೀರ ಸಾಂವಿಧಾನಿಕ ಬಿಕ್ಕಟ್ಟು' ಎದುರಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ.</p><p>ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕರೂ ಆಗಿರುವ ಕೇಜ್ರಿವಾಲ್, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ದೆಹಲಿಯು ಸಂಪೂರ್ಣ ರಾಜ್ಯ ಸ್ಥಾನಮಾನ ಹೊಂದದೇ ಇರುವುದರಿಂದ ಇಂತಹ ಸಮಸ್ಯೆಗಳು ಉದ್ಭವಿಸಿವೆ. ದೆಹಲಿ ಮೇಲಿನ ನಿಜವಾದ ಅಧಿಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ (ಬಿಜೆಪಿ) ಬಳಿಯಿದೆ. 'ಆ ಪಕ್ಷಕ್ಕೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ತನ್ನ ಕೆಲಸ ಮಾಡುವುದು ಇಷ್ಟವಿಲ್ಲ' ಎಂದು ಆರೋಪಿಸಿದ್ದಾರೆ.</p><p>ನೀರಿನ ಬಿಲ್ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಒಂದು ಬಾರಿ ಮರುಪಾವತಿ (ಒಟಿಎಸ್) ಯೋಜನೆ ಜಾರಿಗೊಳಿಸಲು ಕೆಲವು ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಈ ಯೋಜನೆ ಜಾರಿಗೊಳಿಸದಂತೆ ಬಿಜೆಪಿಯು ಅಧಿಕಾರಿಗಳನ್ನು ಬೆದರಿಸುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ.</p><p>ಅಧಿಕಾರಿಗಳು ಕೆಲಸ ಮಾಡಲು ಮುಂದಾಗದ ಕಾರಣ ದೆಹಲಿಯಲ್ಲಿ ಗಂಭೀರ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಅವರು ಹೇಳಿದ್ದಾರೆ.</p><p>10.5 ಲಕ್ಷ ಕುಟುಂಬಗಳು ಯೋಜನೆಯ ಲಾಭ ಪಡೆಯಲಿವೆ. ಹಾಗಾಗಿ, ಯೋಜನೆಯನ್ನು ಜಾರಿಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅಧಿಕಾರಿಗಳಿಗೆ ಕರೆ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.</p><p>ಸಿಎಂ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿಯವರಿಂದ ತಮಗೆ ಬೆದರಿಕೆ ಮತ್ತು ಒತ್ತಡವಿದ್ದು, ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 'ಗಂಭೀರ ಸಾಂವಿಧಾನಿಕ ಬಿಕ್ಕಟ್ಟು' ಎದುರಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ.</p><p>ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕರೂ ಆಗಿರುವ ಕೇಜ್ರಿವಾಲ್, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ದೆಹಲಿಯು ಸಂಪೂರ್ಣ ರಾಜ್ಯ ಸ್ಥಾನಮಾನ ಹೊಂದದೇ ಇರುವುದರಿಂದ ಇಂತಹ ಸಮಸ್ಯೆಗಳು ಉದ್ಭವಿಸಿವೆ. ದೆಹಲಿ ಮೇಲಿನ ನಿಜವಾದ ಅಧಿಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ (ಬಿಜೆಪಿ) ಬಳಿಯಿದೆ. 'ಆ ಪಕ್ಷಕ್ಕೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ತನ್ನ ಕೆಲಸ ಮಾಡುವುದು ಇಷ್ಟವಿಲ್ಲ' ಎಂದು ಆರೋಪಿಸಿದ್ದಾರೆ.</p><p>ನೀರಿನ ಬಿಲ್ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಒಂದು ಬಾರಿ ಮರುಪಾವತಿ (ಒಟಿಎಸ್) ಯೋಜನೆ ಜಾರಿಗೊಳಿಸಲು ಕೆಲವು ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಈ ಯೋಜನೆ ಜಾರಿಗೊಳಿಸದಂತೆ ಬಿಜೆಪಿಯು ಅಧಿಕಾರಿಗಳನ್ನು ಬೆದರಿಸುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ.</p><p>ಅಧಿಕಾರಿಗಳು ಕೆಲಸ ಮಾಡಲು ಮುಂದಾಗದ ಕಾರಣ ದೆಹಲಿಯಲ್ಲಿ ಗಂಭೀರ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಅವರು ಹೇಳಿದ್ದಾರೆ.</p><p>10.5 ಲಕ್ಷ ಕುಟುಂಬಗಳು ಯೋಜನೆಯ ಲಾಭ ಪಡೆಯಲಿವೆ. ಹಾಗಾಗಿ, ಯೋಜನೆಯನ್ನು ಜಾರಿಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅಧಿಕಾರಿಗಳಿಗೆ ಕರೆ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.</p><p>ಸಿಎಂ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>