<p><strong>ಮುಂಬೈ:</strong>ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಮಂಗಳವಾರ ಬಿಜೆಪಿ ಸೇರಿದರು. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಬಿಜೆಪಿಯ ಹಿರಿಯ ನಾಯಕರು ಸುಜಯ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.</p>.<p>ಲೋಕಸಭೆ ಚುನಾವಣೆಯಲ್ಲಿ ಅಹ್ಮದ್ನಗರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ನಿಂದ ಅವಕಾಶ ದೊರೆಯದಿರುವುದು ಖಚಿತವಾದ ಹಿನ್ನೆಲೆಯಲ್ಲಿ ಸುಜಯ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ವಿಷಯವಾಗಿಶರದ್ ಪವಾರ್ ನೇತೃತ್ವದ ಎನ್ಸಿಪಿ ಜತೆ ಕಾಂಗ್ರೆಸ್ ಈಚೆಗೆ ಒಪ್ಪಂದ ಮಾಡಿಕೊಂಡಿತ್ತು. 26 ಕ್ಷೇತ್ರಗಳನ್ನು ಉಳಿಸಿಕೊಂಡಿದ್ದ ಕಾಂಗ್ರೆಸ್ 22 ಕ್ಷೇತ್ರಗಳನ್ನು ಎನ್ಸಿಪಿಗೆ ಬಿಟ್ಟುಕೊಟ್ಟಿದೆ.</p>.<p>ಅಹ್ಮದ್ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಗನಿಗೆ ಅವಕಾಶ ನೀಡಬೇಕು ಎಂಬರಾಧಾಕೃಷ್ಣ ವಿಖೆ ಪಾಟೀಲ್ ಮನವಿಯನ್ನು ಎನ್ಸಿಪಿ ತಿರಸ್ಕರಿಸಿದೆ. ಪ್ರಸ್ತುತಅಹ್ಮದ್ನಗರ ಕ್ಷೇತ್ರದಲ್ಲಿ ಬಿಜೆಪಿಯ ದಿಲೀಪ್ ಗಾಂಧಿ ಸಂಸದರಾಗಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈ ಹಿಂದೆಸುಜಯ್ ಹೇಳಿದ್ದರು. ಬಳಿಕ ಅವರು ಬಿಜೆಪಿ ನಾಯಕ ಗಿರೀಶ್ ಮಹಾಜನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.</p>.<p><strong>ಬಿಜೆಪಿಯಲ್ಲಿ ವಿರೋಧ:</strong> ಸುಜಯ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದಕ್ಕೆ ಬಿಜೆಪಿಯ ಕೆಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ಚುನಾವಣೆಯಲ್ಲಿ ಪ್ರತಿನಿಧಿಸುವುದಕ್ಕೂ ಮೊದಲು ಅವರು ಪಕ್ಷಕ್ಕಾಗಿ ಕೆಲಸ ಮಾಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಮಂಗಳವಾರ ಬಿಜೆಪಿ ಸೇರಿದರು. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಬಿಜೆಪಿಯ ಹಿರಿಯ ನಾಯಕರು ಸುಜಯ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.</p>.<p>ಲೋಕಸಭೆ ಚುನಾವಣೆಯಲ್ಲಿ ಅಹ್ಮದ್ನಗರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ನಿಂದ ಅವಕಾಶ ದೊರೆಯದಿರುವುದು ಖಚಿತವಾದ ಹಿನ್ನೆಲೆಯಲ್ಲಿ ಸುಜಯ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ವಿಷಯವಾಗಿಶರದ್ ಪವಾರ್ ನೇತೃತ್ವದ ಎನ್ಸಿಪಿ ಜತೆ ಕಾಂಗ್ರೆಸ್ ಈಚೆಗೆ ಒಪ್ಪಂದ ಮಾಡಿಕೊಂಡಿತ್ತು. 26 ಕ್ಷೇತ್ರಗಳನ್ನು ಉಳಿಸಿಕೊಂಡಿದ್ದ ಕಾಂಗ್ರೆಸ್ 22 ಕ್ಷೇತ್ರಗಳನ್ನು ಎನ್ಸಿಪಿಗೆ ಬಿಟ್ಟುಕೊಟ್ಟಿದೆ.</p>.<p>ಅಹ್ಮದ್ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಗನಿಗೆ ಅವಕಾಶ ನೀಡಬೇಕು ಎಂಬರಾಧಾಕೃಷ್ಣ ವಿಖೆ ಪಾಟೀಲ್ ಮನವಿಯನ್ನು ಎನ್ಸಿಪಿ ತಿರಸ್ಕರಿಸಿದೆ. ಪ್ರಸ್ತುತಅಹ್ಮದ್ನಗರ ಕ್ಷೇತ್ರದಲ್ಲಿ ಬಿಜೆಪಿಯ ದಿಲೀಪ್ ಗಾಂಧಿ ಸಂಸದರಾಗಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈ ಹಿಂದೆಸುಜಯ್ ಹೇಳಿದ್ದರು. ಬಳಿಕ ಅವರು ಬಿಜೆಪಿ ನಾಯಕ ಗಿರೀಶ್ ಮಹಾಜನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.</p>.<p><strong>ಬಿಜೆಪಿಯಲ್ಲಿ ವಿರೋಧ:</strong> ಸುಜಯ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದಕ್ಕೆ ಬಿಜೆಪಿಯ ಕೆಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ಚುನಾವಣೆಯಲ್ಲಿ ಪ್ರತಿನಿಧಿಸುವುದಕ್ಕೂ ಮೊದಲು ಅವರು ಪಕ್ಷಕ್ಕಾಗಿ ಕೆಲಸ ಮಾಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>