<p><strong>ತಿರುವನಂತಪುರ</strong>: ಮುನಂಬಮ್ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿ ಕೇರಳದ ಕ್ರಿಶ್ಚಿಯನ್ ಸಮುದಾಯದವನ್ನು ಪ್ರಭಾವಿಸುವ ಬಿಜೆಪಿ ಯತ್ನವು ಅಷ್ಟೇನೂ ಫಲಪ್ರದವಾದಂತೆ ತೋರುತ್ತಿಲ್ಲ. ‘ಬಿಜೆಪಿಯು ಹೇಳುತ್ತಿದ್ದಂತೆ ವಕ್ಫ್ (ತಿದ್ದುಪಡಿ) ಕಾಯ್ದೆಯು ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಕಾಣುತ್ತಿಲ್ಲ’ ಎಂಬ ಅಭಿಪ್ರಾಯವನ್ನು ಸಮುದಾಯದ ನಾಯಕರು ವ್ಯಕ್ತಪಡಿಸುತ್ತಿದ್ದಾರೆ.</p>.<p>ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಮುನಂಬಮ್ಗೆ ಭೇಟಿ ನೀಡಿದ್ದರು. ಅವರ ಭೇಟಿಯ ಬಳಿಕ ಮುನಂಬಮ್ ನಿವಾಸಿಗಳ ಕಾರ್ಯಕಾರಿ ಸಮಿತಿ ಮತ್ತು ಸೈರೊ ಮಲಬಾರ್ ಕ್ಯಾಥೋಲಿಕ್ ಚರ್ಚ್, ಬಹಿರಂಗವಾಗಿಯೇ ಕಳವಳ ವ್ಯಕ್ತಪಡಿಸಿವೆ.</p>.<p>‘ಈ ಪ್ರದೇಶದ ಜನರ ಸಮಸ್ಯೆಗಳಿಗೆ ವಕ್ಫ್ ಕಾಯ್ದೆಗೆ ತಂದಿರುವ ತಿದ್ದುಪಡಿಯು ನೇರವಾಗಿ ಪರಿಹಾರ ಒದಗಿಸುವುದಿಲ್ಲ. ಕೆಲವು ರಾಜಕೀಯ ಪಕ್ಷದ ನಾಯಕರು ಈ ಭಾಗದ ಜನರ ದಾರಿ ತಪ್ಪಿಸಿದ್ದಾರೆ. ತಮ್ಮ ಪಕ್ಷಕ್ಕೆ ಭಾವನಾತ್ಮಕ ಬೆಂಬಲ ಗಿಟ್ಟಿಸಿಕೊಳ್ಳಲು ಈ ರೀತಿ ಮಾಡಿದ್ದಾರೆ’ ಎಂದು ಮಲಬಾರ್ ಚರ್ಚ್ನ ವಕ್ತಾರ ಆ್ಯಂಥೋನಿ ವಡಕ್ಕೇಕರ್ ಬುಧವಾರ ಹೇಳಿದರು.</p>.<p>‘ನಮ್ಮ ಸಮಸ್ಯೆಗಳಿಗೆ ನೇರ ಪರಿಹಾರ ಸೂಚಿಸಲು ಕೇಂದ್ರ ಸಚಿವರಿಗೂ ಸಾಧ್ಯವಾಗಲಿಲ್ಲ. ಆದರೆ, ಇದಕ್ಕೊಂದು ಕಾನೂನಾತ್ಮಕ ಪರಿಹಾರ ನೀಡವ ಬಗ್ಗೆ ಸಚಿವರು ವಾಗ್ದಾನ ನೀಡಿದರು’ ಎಂದು ಚರ್ಚ್ನ ಫಾದರ್ ಆ್ಯಂಟೊನಿ ತಾರಾಯಿಲ್ ಹಾಗೂ ಮುನಂಬಮ್ ನಿವಾಸಿಗಳ ಕಾರ್ಯಕಾರಿ ಸಮಿತಿಯ ಮುಖಂಡರು ಹೇಳಿದರು.</p>.<p>ಮುನಂಬಮ್ ವಿವಾದವನ್ನೇ ಇಟ್ಟುಕೊಂಡು ಕೇರಳ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ ಮತ್ತು ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾವು ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಬೆಂಬಲಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಮುನಂಬಮ್ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿ ಕೇರಳದ ಕ್ರಿಶ್ಚಿಯನ್ ಸಮುದಾಯದವನ್ನು ಪ್ರಭಾವಿಸುವ ಬಿಜೆಪಿ ಯತ್ನವು ಅಷ್ಟೇನೂ ಫಲಪ್ರದವಾದಂತೆ ತೋರುತ್ತಿಲ್ಲ. ‘ಬಿಜೆಪಿಯು ಹೇಳುತ್ತಿದ್ದಂತೆ ವಕ್ಫ್ (ತಿದ್ದುಪಡಿ) ಕಾಯ್ದೆಯು ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಕಾಣುತ್ತಿಲ್ಲ’ ಎಂಬ ಅಭಿಪ್ರಾಯವನ್ನು ಸಮುದಾಯದ ನಾಯಕರು ವ್ಯಕ್ತಪಡಿಸುತ್ತಿದ್ದಾರೆ.</p>.<p>ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಮುನಂಬಮ್ಗೆ ಭೇಟಿ ನೀಡಿದ್ದರು. ಅವರ ಭೇಟಿಯ ಬಳಿಕ ಮುನಂಬಮ್ ನಿವಾಸಿಗಳ ಕಾರ್ಯಕಾರಿ ಸಮಿತಿ ಮತ್ತು ಸೈರೊ ಮಲಬಾರ್ ಕ್ಯಾಥೋಲಿಕ್ ಚರ್ಚ್, ಬಹಿರಂಗವಾಗಿಯೇ ಕಳವಳ ವ್ಯಕ್ತಪಡಿಸಿವೆ.</p>.<p>‘ಈ ಪ್ರದೇಶದ ಜನರ ಸಮಸ್ಯೆಗಳಿಗೆ ವಕ್ಫ್ ಕಾಯ್ದೆಗೆ ತಂದಿರುವ ತಿದ್ದುಪಡಿಯು ನೇರವಾಗಿ ಪರಿಹಾರ ಒದಗಿಸುವುದಿಲ್ಲ. ಕೆಲವು ರಾಜಕೀಯ ಪಕ್ಷದ ನಾಯಕರು ಈ ಭಾಗದ ಜನರ ದಾರಿ ತಪ್ಪಿಸಿದ್ದಾರೆ. ತಮ್ಮ ಪಕ್ಷಕ್ಕೆ ಭಾವನಾತ್ಮಕ ಬೆಂಬಲ ಗಿಟ್ಟಿಸಿಕೊಳ್ಳಲು ಈ ರೀತಿ ಮಾಡಿದ್ದಾರೆ’ ಎಂದು ಮಲಬಾರ್ ಚರ್ಚ್ನ ವಕ್ತಾರ ಆ್ಯಂಥೋನಿ ವಡಕ್ಕೇಕರ್ ಬುಧವಾರ ಹೇಳಿದರು.</p>.<p>‘ನಮ್ಮ ಸಮಸ್ಯೆಗಳಿಗೆ ನೇರ ಪರಿಹಾರ ಸೂಚಿಸಲು ಕೇಂದ್ರ ಸಚಿವರಿಗೂ ಸಾಧ್ಯವಾಗಲಿಲ್ಲ. ಆದರೆ, ಇದಕ್ಕೊಂದು ಕಾನೂನಾತ್ಮಕ ಪರಿಹಾರ ನೀಡವ ಬಗ್ಗೆ ಸಚಿವರು ವಾಗ್ದಾನ ನೀಡಿದರು’ ಎಂದು ಚರ್ಚ್ನ ಫಾದರ್ ಆ್ಯಂಟೊನಿ ತಾರಾಯಿಲ್ ಹಾಗೂ ಮುನಂಬಮ್ ನಿವಾಸಿಗಳ ಕಾರ್ಯಕಾರಿ ಸಮಿತಿಯ ಮುಖಂಡರು ಹೇಳಿದರು.</p>.<p>ಮುನಂಬಮ್ ವಿವಾದವನ್ನೇ ಇಟ್ಟುಕೊಂಡು ಕೇರಳ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ ಮತ್ತು ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾವು ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಬೆಂಬಲಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>