ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಬಾಬು ನಾಯ್ಡು ರೋಡ್‌ ಶೋ | ಕಾಲ್ತುಳಿತ: ಏಳು ಮಂದಿ ಸಾವು

ಚಂದ್ರಬಾಬು ನಾಯ್ಡು ರೋಡ್‌ ಶೋನಲ್ಲಿ ಅವಘಡ
Last Updated 28 ಡಿಸೆಂಬರ್ 2022, 19:17 IST
ಅಕ್ಷರ ಗಾತ್ರ

ಹೈದರಾಬಾದ್‌:ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬುಧವಾರ ಸಂಜೆ ಕಂದಕೂರ್ ಪಟ್ಟಣದಲ್ಲಿ ನಡೆಸಿದ ರೋಡ್ ಶೋನಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.

ರ್‍ಯಾಲಿಯಲ್ಲಿ ಭಾಗವಹಿಸಲು ಬಂದಿದ್ದ ಏಳು ಟಿಡಿಪಿ ಬೆಂಬಲಿಗರು ಒಳಚರಂಡಿ ಕಾಲುವೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

ನಂತರ ಎನ್‌ಟಿಆರ್‌ ವೃತ್ತದಲ್ಲಿ ನಡೆದ ರ್‍ಯಾಲಿಯಲ್ಲಿ ಟಿಡಿಪಿ ವತಿಯಿಂದ ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರವನ್ನು ನಾಯ್ಡು ಘೋಷಿಸಿದರು.

‘ಎನ್‌ಟಿಆರ್‌ಟ್ರಸ್ಟ್ ಮೂಲಕ ಮೃತರ ಕುಟುಂಬದವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಾಗುವುದು’ ಎಂದು ನಾಯ್ಡು ಹೇಳಿದರು.

ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT