ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ: ಸುಣ್ಣದ ಕಲ್ಲಿನ ಗಣಿ ಕುಸಿದು 7 ಮಂದಿ ಸಾವು

Last Updated 2 ಡಿಸೆಂಬರ್ 2022, 12:29 IST
ಅಕ್ಷರ ಗಾತ್ರ

ಜಗದಲ್‌ಪುರ: ಛತ್ತೀಸಗಡದ ಬಸ್ತಾರ್ ಜಿಲ್ಲೆಯ ಮಾಲೆಗಾಂವ್ ಗ್ರಾಮದಲ್ಲಿ ಸುಣ್ಣದ ಕಲ್ಲಿನ ಗಣಿಯ ಒಂದು ಭಾಗ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಆರು ಮಂದಿ ಮಹಿಳೆಯರು ಸೇರಿದ್ದಾರೆ.

ಜಗದಲ್‌ಪುರದಿಂದ 12 ಕಿ.ಮೀ. ದೂರದಲ್ಲಿ ನಗರ್‌ನಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

ಗಣಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಒಂದು ಭಾಗ ಕುಸಿದಿದೆ. ಇದರಿಂದ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಐವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT