<p><strong>ಮುಂಬೈ:</strong> ವೈದ್ಯಕೀಯ ಕೋರ್ಸ್ಗಳ ಪರೀಕ್ಷೆಗಳಲ್ಲಿ ಹಲವು ಅಭ್ಯರ್ಥಿಗಳು ಅಕ್ರಮ ನಡೆಸುತ್ತಾರೆ. ಇದು ‘ಮುನ್ನಾಭಾಯ್ ಎಂಬಿಬಿಎಸ್’ ಸಿನಿಮಾವನ್ನು ನೆನಪಿಸುವಂತಿದೆ ಎಂದು ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠ ಹೇಳಿದೆ.</p>.<p>ಅಗತ್ಯ ದಾಖಲೆಪತ್ರ ಇಲ್ಲದಿದ್ದ ಕಾರಣಕ್ಕೆ ನೀಟ್ ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗದಿದ್ದ ಶ್ಯಾಮಸುಂದರ ಪಾಟೀಲ್ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ಕೋರ್ಟ್ ಈಚೆಗೆ ಈ ಮಾತು ಹೇಳಿದೆ.</p>.<p>ಸೂಪರ್ ಸ್ಪೆಷಾಲಿಟಿ ಕೋರ್ಸ್ಗೆ ಪ್ರವೇಶಕ್ಕೆ ತಮಗೆ ನೀಟ್ ಪರೀಕ್ಷೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಆದೇಶಿಸಬೇಕು ಎಂದು ಪಾಟೀಲ್ ಅವರು ಕೋರಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಆರ್.ವಿ. ಘುಗೆ ಮತ್ತು ವೈ.ಜಿ. ಖೊಬ್ರಗಡೆ ಅವರಿದ್ದ ಪೀಠ ನಡೆಸಿತ್ತು.</p>.<p>ವೈದ್ಯಕೀಯ ಮಂಡಳಿ ನೀಡುವ ಶಾಶ್ವತ ನೋಂದಣಿ ಪ್ರಮಾಣಪತ್ರದ ಭೌತಿಕ ಪ್ರತಿಯನ್ನು ಹೊಂದಿರದಿದ್ದ ಕಾರಣ ಪಾಟೀಲ್ ಅವರಿಗೆ ಸೆಪ್ಟೆಂಬರ್ನಲ್ಲಿ ಹೈದರಾಬಾದ್ನಲ್ಲಿ ನಡೆದ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವೈದ್ಯಕೀಯ ಕೋರ್ಸ್ಗಳ ಪರೀಕ್ಷೆಗಳಲ್ಲಿ ಹಲವು ಅಭ್ಯರ್ಥಿಗಳು ಅಕ್ರಮ ನಡೆಸುತ್ತಾರೆ. ಇದು ‘ಮುನ್ನಾಭಾಯ್ ಎಂಬಿಬಿಎಸ್’ ಸಿನಿಮಾವನ್ನು ನೆನಪಿಸುವಂತಿದೆ ಎಂದು ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠ ಹೇಳಿದೆ.</p>.<p>ಅಗತ್ಯ ದಾಖಲೆಪತ್ರ ಇಲ್ಲದಿದ್ದ ಕಾರಣಕ್ಕೆ ನೀಟ್ ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗದಿದ್ದ ಶ್ಯಾಮಸುಂದರ ಪಾಟೀಲ್ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ಕೋರ್ಟ್ ಈಚೆಗೆ ಈ ಮಾತು ಹೇಳಿದೆ.</p>.<p>ಸೂಪರ್ ಸ್ಪೆಷಾಲಿಟಿ ಕೋರ್ಸ್ಗೆ ಪ್ರವೇಶಕ್ಕೆ ತಮಗೆ ನೀಟ್ ಪರೀಕ್ಷೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಆದೇಶಿಸಬೇಕು ಎಂದು ಪಾಟೀಲ್ ಅವರು ಕೋರಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಆರ್.ವಿ. ಘುಗೆ ಮತ್ತು ವೈ.ಜಿ. ಖೊಬ್ರಗಡೆ ಅವರಿದ್ದ ಪೀಠ ನಡೆಸಿತ್ತು.</p>.<p>ವೈದ್ಯಕೀಯ ಮಂಡಳಿ ನೀಡುವ ಶಾಶ್ವತ ನೋಂದಣಿ ಪ್ರಮಾಣಪತ್ರದ ಭೌತಿಕ ಪ್ರತಿಯನ್ನು ಹೊಂದಿರದಿದ್ದ ಕಾರಣ ಪಾಟೀಲ್ ಅವರಿಗೆ ಸೆಪ್ಟೆಂಬರ್ನಲ್ಲಿ ಹೈದರಾಬಾದ್ನಲ್ಲಿ ನಡೆದ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>