ಈ ದುರ್ಘಟನೆಯಲ್ಲಿ ಪಂಜಾಬಿ ಗಾಯಕ ಮನ್ಮೀತ್ ಸಿಂಗ್ ಮೃತಪಟ್ಟಿದ್ದಾರೆ. ಅಮೃತಸರ ಮೂಲದವರಾದ ಅವರು ಸ್ನೇಹಿತರ ಜೊತೆಗೆ ಕರೇರಿ ಸರೋವರಕ್ಕೆ ಹೋಗಿದ್ದರು. ಅವರ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೋಹ್ ಕಣಿವೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಆರು ಮಂದಿ ಸಾವಿಗೀಡಾಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರಾ ಜಿಲ್ಲಾಧಿಕಾರಿ ನಿಪುಣ್ ಜಿಂದಾಲ್ ತಿಳಿಸಿದ್ದಾರೆ.
ಮಂಗಳವಾರ ಬೋಹ್ ಕಣಿವೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ಭೂಕುಸಿತದಲ್ಲಿ ಮನೆಕಳೆದುಕೊಂಡವರಿಗೆ ರಾಜ್ಯ ಸರ್ಕಾರವು ಹೊಸ ಮನೆಯನ್ನು ಕಟ್ಟಿಸಿಕೊಡುವ ಭರವಸೆ ನೀಡಿದ್ದರು.