<p><strong>ಗಿರಿಡೀಹ್:</strong> ಜಾರ್ಖಂಡ್ನ ಗಿರಿಡೀಹ್ ಜಿಲ್ಲೆಯಲ್ಲಿ ಶುಕ್ರವಾರ ಹೋಳಿ ಹಬ್ಬದ ಆಚರಣೆಯ ವೇಳೆ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. </p><p>ಗುಂಪು ಘರ್ಷಣೆಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>'ಕನಿಷ್ಠ ಮೂರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>ಘೋಡ್ಥಂಬಾದಲ್ಲಿ ಹೋಳಿ ಹಬ್ಬದ ಸಂಭ್ರಮದ ಮೆರವಣಿಗೆ ಹಾದು ಹೋಗುವಾಗ ಇನ್ನೊಂದು ಗುಂಪು ವಿರೋಧಿಸಿರುವುದು ಘರ್ಷಣೆಗೆ ಕಾರಣವಾಯಿತು. ಬಳಿಕ ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. </p><p>'ಪ್ರದೇಶದಲ್ಲಿ ಶಾಂತಿ ಪುನಃಸ್ಥಾಪಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಘರ್ಷಣೆ ಸಂಬಂಧ ತನಿಖೆ ನಡೆಯುತ್ತಿದೆ. ಪರಿಸ್ಥಿತಿ ಮೇಲೆ ನಿಗಾ ವಹಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ. </p>.ಬೆಂಗಳೂರಲ್ಲಿ ಹೋಳಿ ಸಂಭ್ರಮ: ಬಣ್ಣ ಭಾವದ ಪುಳಕ.ವಿಡಿಯೊ ನೋಡಿ | ಸಚಿನ್ ತೆಂಡೂಲ್ಕರ್– ಯುವರಾಜ್ ಸಿಂಗ್ ಹೋಳಿ ಆಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಿರಿಡೀಹ್:</strong> ಜಾರ್ಖಂಡ್ನ ಗಿರಿಡೀಹ್ ಜಿಲ್ಲೆಯಲ್ಲಿ ಶುಕ್ರವಾರ ಹೋಳಿ ಹಬ್ಬದ ಆಚರಣೆಯ ವೇಳೆ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. </p><p>ಗುಂಪು ಘರ್ಷಣೆಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>'ಕನಿಷ್ಠ ಮೂರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>ಘೋಡ್ಥಂಬಾದಲ್ಲಿ ಹೋಳಿ ಹಬ್ಬದ ಸಂಭ್ರಮದ ಮೆರವಣಿಗೆ ಹಾದು ಹೋಗುವಾಗ ಇನ್ನೊಂದು ಗುಂಪು ವಿರೋಧಿಸಿರುವುದು ಘರ್ಷಣೆಗೆ ಕಾರಣವಾಯಿತು. ಬಳಿಕ ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. </p><p>'ಪ್ರದೇಶದಲ್ಲಿ ಶಾಂತಿ ಪುನಃಸ್ಥಾಪಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಘರ್ಷಣೆ ಸಂಬಂಧ ತನಿಖೆ ನಡೆಯುತ್ತಿದೆ. ಪರಿಸ್ಥಿತಿ ಮೇಲೆ ನಿಗಾ ವಹಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ. </p>.ಬೆಂಗಳೂರಲ್ಲಿ ಹೋಳಿ ಸಂಭ್ರಮ: ಬಣ್ಣ ಭಾವದ ಪುಳಕ.ವಿಡಿಯೊ ನೋಡಿ | ಸಚಿನ್ ತೆಂಡೂಲ್ಕರ್– ಯುವರಾಜ್ ಸಿಂಗ್ ಹೋಳಿ ಆಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>