ವಿರುಧ್ನಗರ, ತಮಿಳುನಾಡು: ತಮಿಳುನಾಡಿನ ವಿರುಧ್ನಗರ ಜಿಲ್ಲೆಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಆರು ಪುರುಷರು ಇದ್ದಾರೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ವೆಂಬಾಕೊಟ್ಟೈ ತಾಲ್ಲೂಕಿನ ಕುಂಡಾಯಿರುಪ್ಪು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಏಕಾಏಕಿ ಸ್ಪೋಟ ಸಂಭವಿಸಿತ್ತು.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡು ಸರ್ಕಾರ ಮೃತರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಸ್ಥಳದಲ್ಲಿ ಭಾರಿ ಪ್ರಮಾಣದ ರಸಾಯನಿಕಗಳನ್ನು ಸಂಗ್ರಹಿಸಲಾಗಿದ್ದು ತಿಳಿದು ಬಂದಿದೆ.