<p><strong>ನವದೆಹಲಿ:</strong> ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು, ಅದು 9ನೇ ತರಗತಿಯಿಂದ ಆರಂಭವಾಗಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರಿದ್ದ ದ್ವಿಸದಸ್ಯ ಪೀಠ ಈ ಅಭಿಪ್ರಾಯಪಟ್ಟಿದೆ.</p><p>ಲೈಂಗಿಕ ಶಿಕ್ಷಣ ಪ್ರೌಢಶಾಲಾ ಪಠ್ಯಕ್ರಮದ ಭಾಗವಾಗಬೇಕು, ಇದರಿಂದ ಯವೌನಕ್ಕೆ ಕಾಲಿಟ್ಟ ಹರೆಯದವರು ತಮ್ಮ ದೇಹದಲ್ಲಿ ಉಂಟಾಗುವ ಹಾರ್ಮೋನ್ಗಳ ಬದಲಾವಣೆ ಬಗ್ಗೆ ಅರಿವು ಹೊಂದಿದಂತಾಗುತ್ತದೆ.</p><p>ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು, 9ನೇ ತರಗತಿಯಿಂದ ಆರಂಭವಾಗಬಾರದು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಆಲೋಚಿಸಿ, ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳಬೇಕು, ಹೀಗಾಗಿ ಮಕ್ಕಳಿಗೆ ಯೌವನದ ಬಳಿಕ ನಡೆಯುವ ದೇಹದ ಬದಲಾವಣೆಗಳು ಹಾಗೂ ಸಂಬಂಧಿತ ಮುಂಜಾಗ್ರತೆ ಬಗ್ಗೆ ತಿಳುವಳಿಕೆ ಸಿಗಲಿ ಎಂದು ಪೀಠ ತಿಳಿಸಿದೆ.</p><p>ಅತ್ಯಾಚಾರ ಪ್ರಕರಣದಲ್ಲಿ 15 ವರ್ಷದ ಬಾಲಕನಿಗೆ ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಬಾಲಕನಿಗೆ ಷರತ್ತುಗಳ ಮೇಲೆ ಜಾಮೀನು ನೀಡುವಂತೆ ಕೋರ್ಟ್ ನಿರ್ದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು, ಅದು 9ನೇ ತರಗತಿಯಿಂದ ಆರಂಭವಾಗಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರಿದ್ದ ದ್ವಿಸದಸ್ಯ ಪೀಠ ಈ ಅಭಿಪ್ರಾಯಪಟ್ಟಿದೆ.</p><p>ಲೈಂಗಿಕ ಶಿಕ್ಷಣ ಪ್ರೌಢಶಾಲಾ ಪಠ್ಯಕ್ರಮದ ಭಾಗವಾಗಬೇಕು, ಇದರಿಂದ ಯವೌನಕ್ಕೆ ಕಾಲಿಟ್ಟ ಹರೆಯದವರು ತಮ್ಮ ದೇಹದಲ್ಲಿ ಉಂಟಾಗುವ ಹಾರ್ಮೋನ್ಗಳ ಬದಲಾವಣೆ ಬಗ್ಗೆ ಅರಿವು ಹೊಂದಿದಂತಾಗುತ್ತದೆ.</p><p>ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು, 9ನೇ ತರಗತಿಯಿಂದ ಆರಂಭವಾಗಬಾರದು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಆಲೋಚಿಸಿ, ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳಬೇಕು, ಹೀಗಾಗಿ ಮಕ್ಕಳಿಗೆ ಯೌವನದ ಬಳಿಕ ನಡೆಯುವ ದೇಹದ ಬದಲಾವಣೆಗಳು ಹಾಗೂ ಸಂಬಂಧಿತ ಮುಂಜಾಗ್ರತೆ ಬಗ್ಗೆ ತಿಳುವಳಿಕೆ ಸಿಗಲಿ ಎಂದು ಪೀಠ ತಿಳಿಸಿದೆ.</p><p>ಅತ್ಯಾಚಾರ ಪ್ರಕರಣದಲ್ಲಿ 15 ವರ್ಷದ ಬಾಲಕನಿಗೆ ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಬಾಲಕನಿಗೆ ಷರತ್ತುಗಳ ಮೇಲೆ ಜಾಮೀನು ನೀಡುವಂತೆ ಕೋರ್ಟ್ ನಿರ್ದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>