<p><strong>ಲಖನೌ:</strong> ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ. ಅಂತಹ ಪ್ರಕರಣಗಳನ್ನು ನಿರ್ವಹಿಸಲು ಕಾನೂನು ರೂಪಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.</p>.<p>ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ವ್ಯಕ್ತಿಯೊಬ್ಬ ಬಳಿಕ ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಸಂತ್ರಸ್ತ ಮಹಿಳೆಯುಉತ್ತರ ಪ್ರದೇಶದ ಕಾನ್ಪುರದಲ್ಲಿ ದೂರು ದಾಖಲಿಸಿದ್ದರು.ಸದ್ಯ ಬಂಧನಕ್ಕೊಳಗಾಗಿರುವ ವ್ಯಕ್ತಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದ ಪೀಠ ಜಾಮೀನು ನೀಡಲು ನಿರಾಕರಿಸಿದೆ.</p>.<p>ʼಅತ್ಯಾಚಾರವುಸಮಾಜದಲ್ಲಿ ಅತ್ಯಂತ ಖಂಡನೀಯ ಅಪರಾಧವಾಗಿದೆ. ಇದು ಸಂತ್ರಸ್ತೆಯ ಮನಸ್ಸಿನ ಮೇಲೆ ದೀರ್ಘಕಾಲದವರೆಗೆ ಪರಿಣಾಮ ಬೀರುತ್ತದೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ ಎಂದು ಪರಿಗಣಿಸಲಾಗುತ್ತದೆʼ ಎಂದು ಪೀಠ ಹೇಳಿದೆ.</p>.<p>ʼಆರೋಪಿಯುಸಂತ್ರಸ್ತೆಗೆ ಮೋಸ ಮಾಡುವಉದ್ದೇಶದಿಂದಲೇ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದಾನೆ. ಆರೋಪಿಗಳು ಕಾನೂನಿನಲಾಭ ಪಡೆದು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸುವುದರಿಂದಇಂತಹ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆʼ ಎಂದೂ ಹೇಳಿದೆ.</p>.<p>ಮುಂದುವರಿದು, ಇಂತಹ ಪ್ರಕರಣಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸ್ಪಷ್ಟ ಮತ್ತು ನಿರ್ದಿಷ್ಟವಾದ ಕಾನೂನು ರೂಪಿಸುವ ಅಗತ್ಯವಿದೆ. ಕಾನೂನು ಜಾರಿಯಾಗುವವರೆಗೂ, ದೀರ್ಘಕಾಲ ಸಂಬಂಧಹೊಂದಿರದ ಹೊರತು ಮದುವೆಯ ಭರವಸೆಯನ್ನು ನಂಬಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಸಂತ್ರಸ್ತಮಹಿಳೆಯರಿಗೆ ರಕ್ಷಣೆ ನೀಡುವುದನ್ನು ಮುಂದುವರಿಸಬೇಕು ಎಂದು ಕೋರ್ಟ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ. ಅಂತಹ ಪ್ರಕರಣಗಳನ್ನು ನಿರ್ವಹಿಸಲು ಕಾನೂನು ರೂಪಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.</p>.<p>ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ವ್ಯಕ್ತಿಯೊಬ್ಬ ಬಳಿಕ ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಸಂತ್ರಸ್ತ ಮಹಿಳೆಯುಉತ್ತರ ಪ್ರದೇಶದ ಕಾನ್ಪುರದಲ್ಲಿ ದೂರು ದಾಖಲಿಸಿದ್ದರು.ಸದ್ಯ ಬಂಧನಕ್ಕೊಳಗಾಗಿರುವ ವ್ಯಕ್ತಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದ ಪೀಠ ಜಾಮೀನು ನೀಡಲು ನಿರಾಕರಿಸಿದೆ.</p>.<p>ʼಅತ್ಯಾಚಾರವುಸಮಾಜದಲ್ಲಿ ಅತ್ಯಂತ ಖಂಡನೀಯ ಅಪರಾಧವಾಗಿದೆ. ಇದು ಸಂತ್ರಸ್ತೆಯ ಮನಸ್ಸಿನ ಮೇಲೆ ದೀರ್ಘಕಾಲದವರೆಗೆ ಪರಿಣಾಮ ಬೀರುತ್ತದೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ ಎಂದು ಪರಿಗಣಿಸಲಾಗುತ್ತದೆʼ ಎಂದು ಪೀಠ ಹೇಳಿದೆ.</p>.<p>ʼಆರೋಪಿಯುಸಂತ್ರಸ್ತೆಗೆ ಮೋಸ ಮಾಡುವಉದ್ದೇಶದಿಂದಲೇ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದಾನೆ. ಆರೋಪಿಗಳು ಕಾನೂನಿನಲಾಭ ಪಡೆದು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸುವುದರಿಂದಇಂತಹ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆʼ ಎಂದೂ ಹೇಳಿದೆ.</p>.<p>ಮುಂದುವರಿದು, ಇಂತಹ ಪ್ರಕರಣಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸ್ಪಷ್ಟ ಮತ್ತು ನಿರ್ದಿಷ್ಟವಾದ ಕಾನೂನು ರೂಪಿಸುವ ಅಗತ್ಯವಿದೆ. ಕಾನೂನು ಜಾರಿಯಾಗುವವರೆಗೂ, ದೀರ್ಘಕಾಲ ಸಂಬಂಧಹೊಂದಿರದ ಹೊರತು ಮದುವೆಯ ಭರವಸೆಯನ್ನು ನಂಬಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಸಂತ್ರಸ್ತಮಹಿಳೆಯರಿಗೆ ರಕ್ಷಣೆ ನೀಡುವುದನ್ನು ಮುಂದುವರಿಸಬೇಕು ಎಂದು ಕೋರ್ಟ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>